Select Your Language

Notifications

webdunia
webdunia
webdunia
webdunia

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ನೇತೃತ್ವದಲ್ಲಿ ಸಭೆ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ನೇತೃತ್ವದಲ್ಲಿ ಸಭೆ
ಬೆಂಗಳೂರು , ಬುಧವಾರ, 18 ಮೇ 2016 (19:38 IST)
ಬೆಂಗಳೂರಿನ ಮಲೇಶ್ವರಂ‌ನಲ್ಲಿರುವ ಬಿಜಿಪಿ ಕಛೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ನೇತೃತ್ವದಲ್ಲಿ ಪಕ್ಷ ಸಂಘಟನೆಗೆ ಸಂಬಂಧಿಸಿದಂತೆ ಸಭೆ ನಡೆದಿದೆ.
ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಕೊಡುಗು ಜಿಲ್ಲೆಯ ಬಿಜಿಪಿ ಮುಖಂಡರ 2 ನೇ ಹಂತದ ಸಂಘಟನಾತ್ಮಕ ಸಭೆ ನಡೆದಿದ್ದು, ಸ್ಥಳೀಯ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಹೋರಾಟವನ್ನು ಸರಿಯಾದ ಮಾರ್ಗದಲ್ಲಿ ನಡೆಸುವಂತೆ ಬಿಜಿಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಮುಖಂಡರಿಗೆ ಸಲಹೆ ನೀಡಿದ್ದಾರೆ.
 
ಕರಾವಳಿ ಭಾಗದಲ್ಲಿ ಧಾರ್ಮಿಕ ಮತ್ತು ದೇಶದ್ರೋಹಿ ವಿಚಾರಗಳಿಗೆ ಸಂಬಂಧಿಸಿದಂತೆ ಹೆಚ್ಚು ನಿಗಾವಹಿಸಲು ಮುಖಂಡರಿಗೆ ಸೂಚನೆ ನೀಡಿದ್ದು, ಈ ಭಾಗದಲ್ಲಿ ಬಿಜಿಪಿ ಹೆಚ್ಚು ಸ್ಥಾನಗಳನ್ನು ಗಳಿಸಬೇಕಾಗಿದೆ ಎಂದು ತಿಳಿಸಿದ್ದಾರೆ. 
 
ಕರಾವಳಿ ಭಾಗದಲ್ಲಿ ಎತ್ತಿನಹೊಳೆ ಯೋಜನೆ ವಿರೋಧಿ ಹೋರಾಟವನ್ನು ಬೆಂಬಲಿಸುವಂತೆ ಸೂಚನೆ ನೀಡಿದರು. ಇದೇ ಸಮಯದಲ್ಲಿ ಕರಾವಳಿ ರೈತರ ಮತ್ತು ಮೀನುಗಾರರ ಸಮಸ್ಯೆಯನ್ನು ವಿಚಾರಿಸಿದ ಯಡಿಯೂರಪ್ಪ, ಸಮಸ್ಯೆಗಳ ಪರಿಹಾರಕ್ಕಾಗಿ ಹೋರಾಟ ಮಾಡಲು ಸಿದ್ದರಿರುವುದಾಗಿ ಘೋಷಿಸಿದರು.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಿ
 

Share this Story:

Follow Webdunia kannada

ಮುಂದಿನ ಸುದ್ದಿ

2ನೇ ಪತ್ನಿಯೊಂದಿಗೆ ಹನಿಮೂನ್‌ಗೆ ಹೋದ ಪತಿ, ಮನೆಗೆ ಬೆಂಕಿಯಿಟ್ಟ ಮೊದಲ ಪತ್ನಿ