Webdunia - Bharat's app for daily news and videos

Install App

ಪದಾಧಿಕಾರಿಗಳ ನೇಮಕದಲ್ಲಿ ರಾಜ್ಯಾಧ್ಯಕ್ಷರಿಗೆ ಪರಮಾಧಿಕಾರ: ಡಿ.ವಿ.ಎಸ್

Webdunia
ಮಂಗಳವಾರ, 28 ಜೂನ್ 2016 (14:38 IST)
ಸಚಿವ ಸಂಪುಟ ವಿಸ್ತರಣೆಯಲ್ಲಿ ಮುಖ್ಯಮಂತ್ರಿಗಳಿಗೆ ಯಾವ ರೀತಿ ಪರಮಾಧಿಕಾರವಿರುತ್ತದೆಯೋ ಅದರಂತೆ ಪಕ್ಷದ ಪದಾಧಿಕಾರಿಗಳ ನೇಮಕದಲ್ಲಿ ಪಕ್ಷದ ಅಧ್ಯಕ್ಷರಿಗೆ ಪರಮಾಧಿಕಾರವಿರುತ್ತದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.
 
ಪಕ್ಷ ಬೆಳೆಯುತ್ತಿರುವುದರಿಂದ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ. ಆಕಾಂಕ್ಷಿಗಳು ಹೆಚ್ಚಾದಾಗ ಪರಸ್ಪರರಲ್ಲಿ ಭಿನ್ನಮತ, ಸಣ್ಣಪುಟ್ಟ ಗೊಂದಲಗಳು ಎದುರಾಗುವುದು ಸಹಜ ಎಂದು ತಿಳಿಸಿದ್ದಾರೆ.
 
ಕೆಜೆಪಿಯಲ್ಲಿದ್ದ ಹೆಚ್ಚಿನ ನಾಯಕರುಗಳಿಗೆ ಪದಾಧಿಕಾರಿಗಳ ಪಟ್ಟಿಯಲ್ಲಿ ಸ್ಥಾನ ನೀಡಲಾಗಿದೆ. ಮೂಲ ಬಿಜೆಪಿಯವರನ್ನು ಕಡೆಗೆಣಿಸಲಾಗಿದೆ ಎನ್ನುವ ಆರೋಪಗಳು ಬಿಜೆಪಿಯಲ್ಲಿ ಭಾರಿ ಗೊಂದಲ ಮೂಡಿಸಿವೆ.
 
ಕೆಜೆಪಿಗಿಂತ ಬಿಜೆಪಿ ಮುಖಂಡರಿಗೆ ಹೆಚ್ಚಿನ ಮಣೆಹಾಕಲಾಗಿದೆ ಎನ್ನುವ ಅಂಕಿಅಂಶಗಳನ್ನು ಮುಂದಿಟ್ಟಿದ್ದರೂ ಕೆಲ ಬಿಜೆಪಿ ನಾಯಕರು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸುತ್ತಿರುವುದು ಬಿಜೆಪಿ ಹಿರಿಯ ನಾಯಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.  

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments