Webdunia - Bharat's app for daily news and videos

Install App

ಬಿಎಂಟಿಸಿ ಬಸ್​​ಗಳಲ್ಲಿ ಪ್ರಯಾಣಿಕರ ನೂಕು ನುಗ್ಗಲು

Webdunia
ಭಾನುವಾರ, 21 ನವೆಂಬರ್ 2021 (21:06 IST)
ಬೆಂಗಳೂರು: ಬಿಎಂಟಿಸಿ ಬಸ್​​ಗಳಲ್ಲಿ ಪ್ರಯಾಣಿಕರ ನೂಕು ನುಗ್ಗಲು ಮಾಡಿ ಬ್ಯಾಗ್ ಹಾಗೂ ಮಹಿಳೆಯರ ಕತ್ತಿನಲ್ಲಿದ್ದ ಚಿನ್ನ ಎಗರಿಸುತ್ತಿದ್ದ ಇಬ್ಬರು ಖದೀಮರನ್ನ ಪೊಲೀಸರು ಬಂಧಿಸಿದ್ದಾರೆ.
ಸೂರ್ಯ ಮತ್ತು ಅರ್ಜುನ್ ಎಂಬುವರು ಬಂಧಿತ ಆರೋಪಿಗಳು.
 
ಬೆಂಗಳೂರು ಸೇರಿದಂತೆ ರಾಮನಗರದಲ್ಲೂ ಕೈಚಳಕ ತೋರಿದ್ದ ಈ ಖದೀಮರು, ಕೊನೆಗೂ ಬ್ಯಾಟರಾಯನಪುರ ಠಾಣೆ ಪೊಲೀಸರ ಕೈಗೆ ಸಿಕ್ಕಿ ಹಾಕಿಕೊಂಡಿದ್ದಾರೆ.
ಆಗಸ್ಟ್ 10ರಂದು ಮೆಜೆಸ್ಟಿಕ್‌ನಿಂದ ಆರ್‌ಆರ್‌ನಗರ ಕಡೆ ಮಹಿಳೆಯೊಬ್ಬಳು ಬಿಎಂಟಿಸಿ ಬಸ್ ಹತ್ತಿದ್ದರು. ಜನಸಂದಣಿ ಇರುವ ಕಾರಣ ನೂಕು ನುಗ್ಗಲು ಮಧ್ಯೆ ಕೆಳಗಿಳಿದಿದ್ದಾಳೆ. ಕೆಳಗಿಳಿದು ವ್ಯಾನಿಟಿ ಬ್ಯಾಗ್ ನೋಡಿಕೊಳ್ಳುತ್ತಿದ್ದಂತೆ ಚಿನ್ನದ ಸರ ಕಳ್ಳತನವಾಗಿತ್ತು. ಘಟನೆ ಸಂಬಂಧ ಬ್ಯಾಟರಾಯನಪುರ ಠಾಣೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.‌
ಸೂರ್ಯ ಮತ್ತು ಅರ್ಜುನ್ ಈ ಇಬ್ಬರ ಬಂಧನದಿಂದ ವಿವಿಧ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ 2 ಕನ್ನ, 2 ಮನೆಗಳವು, 4 ದ್ವಿಚಕ್ರ ವಾಹನ ಕಳವು, 2 ಸಾಮಾನ್ಯ ಕಳವು ಸೇರಿದಂತೆ ಒಟ್ಟು 10 ಪ್ರಕರಣ ಬೆಳಕಿಗೆ ಬಂದಿವೆ. ಬಂಧಿತರಿಂದ 23.50 ಲಕ್ಷ ಮೌಲ್ಯದ 437 ಗ್ರಾಂ ಚಿನ್ನ, 4 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ನಗರ ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ ಪಾಟೀಲ್ ತಿಳಿಸಿದ್ದಾರೆ‌.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments