Webdunia - Bharat's app for daily news and videos

Install App

ಪ್ಯಾಸೆಂಜರ್ ರೈಲು ಸಂಚಾರ ಆರಂಭ

Webdunia
ಸೋಮವಾರ, 5 ಜೂನ್ 2023 (21:31 IST)
ಒಡಿಶಾದ ಬಾಲಸೋರ್‌ನಲ್ಲಿ ತ್ರಿವಳಿ ರೈಲು ಅಪಘಾತದಿಂದ ಹಾನಿಗೊಳಗಾಗಿದ್ದ ಹಳಿಯನ್ನು ದುರಸ್ತಿ ಮಾಡಲಾಗಿದ್ದು, ಪ್ಯಾಸೆಂಜರ್ ರೈಲು ಸಂಚಾರವನ್ನು ರೈಲ್ವೆ ಇಲಾಖೆ ಆರಂಭಿಸಿದೆ. ರೈಲ್ವೆ ಅಧಿಕಾರಿಗಳು ಮತ್ತು ಸಿಬ್ಬಂದಿಯ ನಿರಂತರ ಶ್ರಮದಿಂದ ಹಾನಿಗೊಳಗಾಗಿದ್ದ ಮಾರ್ಗವನ್ನು ಬೇಗ ದುರಸ್ತಿ ಮಾಡಲಾಗಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಟ್ವಿಟ್ ಮೂಲಕ ತಿಳಿಸಿದ್ದರು. ಅದರಂತೆ, ಬೆಂಗಳೂರು ಹೌರಾ ಎಕ್ಸ್‌ಪ್ರೆಸ್ ರೈಲು ಅಪಘಾತಕ್ಕೀಡಾದ ಮಾರ್ಗದಲ್ಲಿ ಭಾನುವಾರ ರಾತ್ರಿ 10.40ಗಂಟೆಗೆ ವಿಶಾಖಪಟ್ಟಣದ ಬಂದರಿನಿಂದ ಕಲ್ಲಿದ್ದಲು ತುಂಬಿದ್ದ ಗೂಡ್ಸ್‌ ರೈಲು ರೂರ್ಕೆಲಾ ಸ್ಟೀಲ್‌ ಪ್ಲಾಂಟ್‌ನತ್ತ ಸಂಚರಿಸಿತ್ತು. ತ್ರಿವಳಿ ರೈಲು ಅಪಘಾತ ಸಂಭವಿಸಿದ 51 ಗಂಟೆಗಳ ಬಳಿಕ ಈ ಮಾರ್ಗದಲ್ಲಿ ಸಂಚರಿಸಿದ ಮೊದಲ ರೈಲು ಇದಾಗಿತ್ತು. ಇಂದು ಬೆಳಿಗ್ಗೆ ಪ್ಯಾಸೆಂಜರ್ ರೈಲು ಸಹ ಸಂಚರಿಸಿದೆ.. ಅಪಘಾತದಲ್ಲಿ ಒಟ್ಟು 275 ಮಂದಿ ಮೃತಪಟ್ಟಿದ್ದು, 200 ಮೃತದೇಹಗಳ ಗುರುತು ಇನ್ನೂ ಪತ್ತೆಯಾಗಿಲ್ಲ. ಡಿಎನ್‌ಎ ಪರಿಶೀಲನೆಗೆ ಅಧಿಕಾರಿಗಳು ಮುಂದಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments