Webdunia - Bharat's app for daily news and videos

Install App

ಗಣಪತಿ ಆತ್ಮಹತ್ಯೆ ಪ್ರಕರಣ: ಪ್ರಧಾನಿ ಮೋದಿಗೆ ಪತ್ರ ಬರೆದ ಪಾವನಾ

Webdunia
ಬುಧವಾರ, 13 ಜುಲೈ 2016 (18:58 IST)
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನನಗೆ ಸಿಐಡಿ ಮತ್ತು ನ್ಯಾಯಾಂಗ ತನಿಖೆಯ ಮೇಲೆ ನಂಬಿಕೆ ಇಲ್ಲ. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆಯುತ್ತಿದ್ದೇನೆ ಎಂದು ಗಣಪತಿ ಪತ್ನಿ ಪಾವನಾ ತಿಳಿಸಿದ್ದಾರೆ.
 
ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿವೈಎಸ್‌ಪಿ ಗಣಪತಿ ಪತ್ನಿ ಪಾವನಾ, ನನ್ನ ಪತಿಯ ಆತ್ಮಹತ್ಯೆ ಪ್ರಕರಣ ಕುರಿತಂತೆ ಸರಕಾರ ನನ್ನಿಂದ ಯಾವುದೇ ಹೇಳಿಕೆಯನ್ನು ಪಡೆದುಕೊಂಡಿಲ್ಲ. ನನ್ನ ಎದುರು ಮಹಜರು ಸಹ ಮಾಡಿಸಿಲ್ಲ. ಒಟ್ಟಾರೆ ರಾಜ್ಯ ಸರಕಾರ ಪ್ರಕರಣದ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಮಾಜಿ ಗೃಹ ಸಚಿವ ಜಾರ್ಜ್ ಅವರನ್ನು ರಕ್ಷಿಸುವ ಉದ್ದೇಶದಿಂದ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.
 
ಪ್ರಕರಣದ ದಾರಿ ತಪ್ಪಿಸಲು ನ್ಯಾಯಾಂಗ ತನಿಖೆ ಮುಂದುವರೆದರೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯುತ್ತೇನೆ ಎಂದು ಡಿವೈಎಸ್‌ಪಿ ಗಣಪತಿ ಪತ್ನಿ ಪಾವನಾ ತಿಳಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DK Shivkumar: ಈ ಬಾರಿ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿಲ್ಲ, ಡಿಸಿಎಂ ಡಿಕೆ ಶಿವಕುಮಾರ್‌ ಕೊಟ್ಟ ಸ್ಟ್ರಾಂಗ್ ಕಾರಣ ಹೀಗಿದೆ

ಅನುಮಾನಸ್ಪದವಾಗಿ ಬಿಜೆಪಿ ನಾಯಕ ದಿಲೀಪ್‌ ಘೋಷ್‌ ಮಲಮಗ ಪ್ರೀತಮ್ ಶವವಾಗಿ ಪತ್ತೆ

BR Gavai: ಮೊದಲ ಬೌದ್ಧ ಮುಖ್ಯ ನ್ಯಾಯಾಧೀಶರಾಗಿ ಬಿಆರ್‌ ಗವಾಯಿ ಪ್ರಮಾಣ ವಚನ ಸ್ವೀಕಾರ

Karnataka Weather: 15ರ ವರೆಗೆ ರಾಜ್ಯದ ಈ ಪ್ರದೇಶಗಲ್ಲಿ ಗುಡುಗು ಸಹಿತ ಭಾರೀ ಮಳೆ

ನಮಗೆ ತೊಂದರೆ ಕೊಟ್ಟವರನ್ನು ಬಿಡುವುದುಂಟೆ: ಪಾಕ್‌ಗೆ ಯೋಗಿ ಆದಿತ್ಯನಾಥ್‌ ಕೌಂಟರ್‌

ಮುಂದಿನ ಸುದ್ದಿ
Show comments