Webdunia - Bharat's app for daily news and videos

Install App

ನಟಿ ಪವಿತ್ರ ಗೌಡ ಮತ್ತೆ ದರ್ಶನ್ ಜತೆ ಕಾಣಿಸಿಕೊಂಡಿದ್ದೇಕೆ ಗೊತ್ತಾ…?

Webdunia
ಮಂಗಳವಾರ, 19 ಸೆಪ್ಟಂಬರ್ 2017 (17:35 IST)
ಬೆಂಗಳೂರು: ನಟಿ ಪವಿತ್ರ ಗೌಡ ಟ್ವಿಟರ್ ಅಕೌಂಟ್ ನಲ್ಲಿ ನಟ ದರ್ಶನ್ ಜತೆಗಿರುವ ಫೋಟೊ ಅಪ್ ಲೋಡ್ ಆಗಿತ್ತು. ಆಗ ಇವರಿಬ್ಬರ ಮಧ್ಯೆ ಏನೋ ನಡೀತಿದೆ ಎಂಬ ಗುಮಾನಿ ಗಾಂಧಿನಗರದಲ್ಲಿ ಸಖತ್ ಸೌಂಡ್ ಮಾಡಿತ್ತು. ಆ ಅಂತೆ ಕಂತೆಗಳಿಗೆ ತೆರೆ ಬೀಳುವ ಮೊದಲೇ ಈಗ ಮತ್ತೊಂದು ಫೋಟೊ ವೈರಲ್ ಆಗಿದೆ.

ಕುರುಕ್ಷೇತ್ರ ಸಿನಿಮಾ ಸದ್ಯ ಹೈದರಾಬಾದ್ ನಲ್ಲಿರುವ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಭರ್ಜರಿ ಸೆಟ್ ನಲ್ಲಿ ಶೂಟಿಂಗ್ ನಡೀತಿದೆ. ಆದರೆ ಕುರುಕ್ಷೇತ್ರ ಸೆಟ್ ನಲ್ಲಿಯೂ ಪವಿತ್ರ ಗೌಡ ಕಾಣಿಸಿಕೊಂಡು ಅಂತೆ ಕಂತೆಗಳ ಗಾಸಿಪ್ ಗೆ ಇಂಬು ನೀಡುವಂತಿದೆ. ಸೆಟ್ ನಲ್ಲಿ ದರ್ಶನ್ ಜತೆಮಾತನಾಡುತ್ತಿರುವ ಫೋಟೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆದರೆ ಇದಾವುದರ ಬಗ್ಗೆಯೂ ದರ್ಶನ್ ಆಗಲಿ, ಪವಿತ್ರ ಗೌಡ ಆಗಲಿ ತುಟಿಬಿಚ್ಚಿಲ್ಲ.

ಕಳೆದ ಬಾರಿಯೇ ದರ್ಶನ್ ಜತೆಗಿನ ಫೋಟೊವನ್ನು ಪವಿತ್ರ ಟ್ವಿಟರ್ ನಲ್ಲಿ ಅಪ್ ಲೋಡ್ ಮಾಡಿದ್ರು. ಆ ಫೋಟೊ ತೆಗೆಯುವಂತೆ ಅಭಿಮಾನಿಗಳು ವಿನಂತಿ ಮಾಡಿದರೂ ಸಹ, `ಕಮೆಂಟ್ ಮಾಡಿದ ಎಲ್ಲರಿಗೂ ಧನ್ಯವಾದ’ ಅಂತ ಹೇಳಿ ಪವಿತ್ರ ಗೌಡ ಸುಮ್ಮನಾಗಿದ್ರು.

ಈ ಹಿಂದೆ ಇದೇ ರೀತಿ ನಟಿ ನಿಖಿತಾ ಬಗ್ಗೆ ಸಹ ಇದೇ ರೀತಿ ಗಾಸಿಪ್ ಹಬ್ಬಿತ್ತು. ಆದರೆ ಆ ಗಾಸಿಪ್ ಗೆ ತೆರೆ ಬಿದ್ದಿತ್ತು. ಈಗ ಪವಿತ್ರ ಗೌಡ ಟ್ವಿಟರ್ ನಲ್ಲಿ ದರ್ಶನ್ ಜತೆಗಿನ ಸೆಲ್ಫಿ ಫೋಟೊ ಹಾಕಿರೋದು ಮತ್ತೆ ವಿವಾದ ಸೃಷ್ಟಿಯಾಗಿದೆ.  ಇವರಿಬ್ಬರ ಮಧ್ಯೆ ಅದೇನು ನಡೆಯುತ್ತಿದೆಯೋ ಗೊತ್ತಿಲ್ಲ. ಆದರೆ ಇದರಿಂದ ಅಭಿಮಾನಿಗಳು ಗೊಂದಲಕ್ಕೊಳಗಾಗಿರೋದಂತು ಸತ್ಯ. ಈ ವಿವಾದಕ್ಕೆ ದರ್ಶನ್ ಮತ್ತು ಪವಿತ್ರ ಗೌಡ ಪ್ರತಿಕ್ರಿಯೆ ನೀಡುವ ಮೂಲಕ ವಿವಾದಕ್ಕೆ ತೆರೆ ಎಳೆಯಬೇಕು ಎಂದು ಅಭಿಮಾನಿಗಳು ಮನವಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

ಮುಂದಿನ ಸುದ್ದಿ
Show comments