Webdunia - Bharat's app for daily news and videos

Install App

ಗಣಪತಿ ಪತ್ನಿ ಪಾವನಾಗೆ ನೋವಾಗಿದ್ದರೆ ವಿಷಾದಿಸುತ್ತೇನೆ: ಸಿಎಂ ಸಿದ್ದರಾಮಯ್ಯ

Webdunia
ಬುಧವಾರ, 13 ಜುಲೈ 2016 (13:14 IST)
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂದಿಸಿದಂತೆ ಸದನದಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಯಿಂದ ಗಣಪತಿ ಪತ್ನಿ ಪಾವನಾ ಅವರ ಮನಸ್ಸಿಗೆ ನೋವಾಗಿದ್ದರೆ ವಿಷಾದಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
 
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂದಿಸಿದಂತೆ ಮೊನ್ನೆ ಸದನದಲ್ಲಿ ಉತ್ತರಿಸಿದ ಗೃಹ ಸಚಿವ ಜಿ.ಪರಮೇಶ್ವರ್, ಗಣಪತಿ ಹಾಗೂ ಪಾವನಾ ಅವರ ದಾಪಂತ್ಯ ಜೀವನದಲ್ಲಿ ವಿರಸ ಉಂಟಾಗಿರುವ ಕಾರಣದಿಂದ ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಿಕೆ ನೀಡಿದ್ದರು.
 
ಗೃಹ ಸಚಿವ ಪರಮೇಶ್ವರ್ ಹೇಳಿಕೆಯಿಂದ ಕೆಂಡಾಮಂಡಲವಾದ ವಿಪಕ್ಷಗಳು ಹೇಳಿಕೆಯನ್ನು ಹಿಂಪಡೆಯುವಂತೆ ಆಗ್ರಹಿಸಿದ್ದವು.
 
ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ನೀಡಿದ್ದು, ಎಂ.ಕೆ.ಗಣಪತಿ ಅವರು ಆತ್ಮಹತ್ಯೆಗೂ ಮುನ್ನ ಖಾಸಗಿ ವಾಹಿನಿಗೆ ಸಂದರ್ಶನ ನೀಡಿದ್ದು, ನನಗೇನಾದ್ರೂ ಆದ್ರೆ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಹಾಗೂ ಅಧಿಕಾರಿಗಳಾದ ಎಂ.ಎಂ.ಪ್ರಸಾದ್ ಮತ್ತು ಮೊಹಾಂತಿ ಅವರೇ ಕಾರಣ ಎಂದು ಹೇಳಿದ್ದರು. ಆದರೆ, ಗಣಪತಿ ಅವರು ಎಂ.ಎಂ.ಪ್ರಸಾದ್ ಅವರ ಕೈಕೆಳಗೆ ಕೆಲಸವೇ ನಿರ್ವಹಿಸಿಲ್ಲ. ಅವರು ಇವರಿಗೆ ಕಿರುಕುಳ ನೀಡಲು ಹೇಗೆ ಸಾಧ್ಯ. ಗಣಪತಿ ಅವರ ಆರೋಪ ಅಸಂಬದ್ಧ. ಸತ್ಯಕ್ಕೆ ದೂರವಾಗಿದೆ ಎಂದು ಹೇಳಿದರು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಪರಿಶುದ್ಧ ಚಿನ್ನದ ಬೆಲೆ ಇಂದು ಮತ್ತಷ್ಟು ಇಳಿಕೆ

ಅಲ್ಪಸಂಖ್ಯಾತರಿಗೆ ವಸತಿ ಯೋಜನೆ ಎಂದ ಸಿದ್ದರಾಮಯ್ಯ: ಹಾಗೆಂದ್ರೆ ಯಾರು ಸಾರ್ ಎಂದ ನೆಟ್ಟಿಗರು

ಬಿಜೆಪಿಗೆ ಮತ್ತೆ ನೀವೇ ಅಧ್ಯಕ್ಷರಾ ಎಂದು ಕೇಳಿದ್ದಕ್ಕೆ ವಿಜಯೇಂದ್ರ ಹೇಳಿದ್ದೇನು ಗೊತ್ತಾ

ಕೇಂದ್ರ ಹೇಳಿದಂತೇ ನಾವು ಅಲ್ಪ ಸಂಖ್ಯಾತರಿಗೆ ಮೀಸಲಾತಿ ಕೊಟ್ಟಿದ್ದು: ಸಿದ್ದರಾಮಯ್ಯ

ಬಿಜೆಪಿ ಯೋಗ ದಿನಾಚರಣೆಯಲ್ಲಿ ನಟಿ ಸುಧಾರಾಣಿ, ನಟ ಕೋಮಲ್

ಮುಂದಿನ ಸುದ್ದಿ
Show comments