Webdunia - Bharat's app for daily news and videos

Install App

ಸಂತೆಗೆ ಮುಗಿಬಿದ್ದ ಜನತೆ: ಪೊಲೀಸರಿಂದ ಲಘು ಲಾಠಿ ಚಾರ್ಜ್

Webdunia
ಶನಿವಾರ, 11 ಏಪ್ರಿಲ್ 2020 (21:08 IST)
ಸಂತೆಯಲ್ಲಿ ಸಾಮಗ್ರಿ ಕೊಳ್ಳೋಕೆ ಮುಗಿಬಿದ್ದೋರಿಗೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.

ಗ್ರಾಮೀಣ ಭಾಗದ ಅಂಗಡಿಗಳಲ್ಲಿ ತರಕಾರಿ ಸಾಮಾಗ್ರಿಗಳಿಗೆ ಕೊರತೆಯಾಗಬಾರದೆಂಬ ದಿಸೆಯಲ್ಲಿ ಉಡುಪಿಯ ಕುಂದಾಪುರದ ಶನಿವಾರದ ಸಂತೆಯಲ್ಲಿ ಕೇವಲ ಅಂಗಡಿ ವ್ಯಾಪಾರಸ್ಥರಿಗೆ ಖರೀದಿಸಲು ಮಾತ್ರ ಅವಕಾಶ ಕಲ್ಪಿಸಲಾಗಿತ್ತು.

ಉಳಿದಂತೆ ಸಾರ್ವಜನಿಕರಿಗೆ ಪ್ರವೇಶಾನುಮತಿ ನಿರಾಕರಿಸಲಾಗಿತ್ತು. ಆದ್ರೆ ಸಂತೆಯಲ್ಲಿ ಸಾರ್ವಜನಿಕರು ಸಾಮಗ್ರಿಗಳನ್ನ ಖರೀದಿಸಲು ಮುಗಿಬಿದ್ದ ದೃಶ್ಯ ಕಂಡು ಬಂದಿದ್ದು, ಪರಿಣಾಮ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಗುಂಪು ಚದುರಿಸಿದರು.
ಲಾಕ್‍ಡೌನ್ ಹಿನ್ನೆಲೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕೇವಲ ಹೋಲ್ ಸೇಲ್ ಮಾರಾಟಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. ಎಪಿಎಂಸಿ ಆವರಣದ ಮೂರು ಗೇಟ್‍ಗಳನ್ನ ಬಂದ್ ಮಾಡಲಾಗಿತ್ತು. ಅಂಗಡಿ ವ್ಯಾಪಾರಸ್ಥರಿಗೆ ಮಾತ್ರ ಖರೀದಿಸಲು ಅವಕಾಶ ಕಲ್ಪಿಸಲಾಗಿತ್ತು.

ಪೊಲೀಸ್ ಬಂದೋಬಸ್ತ್ ನಡುವೆಯೂ ಎಪಿಎಂಸಿ ಆವರಣ ಗೋಡೆಯಿಂದ ಜಿಗಿದು ಸಾರ್ವಜನಿಕರು ಖರೀದಿಗೆ ಮುಂದಾದರು. ಈ ವೇಳೆ ಕುಂದಾಪುರ ನಗರ ಠಾಣಾಧಿಕಾರಿ ಹರೀಶ್ ಆರ್ ನಾಯ್ಕ್ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡರೂ ಸಾರ್ವಜನಿಕರು ಖರೀದಿಗೆ ಮುಂದಾದರು.

ಈ ವೇಳೆ ಪೊಲೀಸರು ಗುಂಪು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಿದರು. ಬಳಿಕ ಕುಂದಾಪುರ ಸಹಾಯಕ ಆಯುಕ್ತ ರಾಜು ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಂಗಡಿ ಮಾಲೀಕರಿಗೆ ಹಾಗೂ ಸಾರ್ವಜನಿಕರಿಗೆ ಸ್ಪಷ್ಟ ಸೂಚನೆ ನೀಡಿ ವಾಪಾಸ್ಸಾದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ಮಾ ಜಾರಿ ಮಾಡಿದ್ರೂ ಹೆದರಲ್ಲ: ಆ.5ರಂದು ಸಾರಿಗೆ ಸೇವೆ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜಗದೀಪ್ ಧನಕರ್ ರಾಜೀನಾಮೆ: ಉಪ ರಾಷ್ಟ್ರಪತಿ ಹುದ್ದೆಯ ಚುನಾವಣಾ ಪ್ರಕ್ರಿಯೆ ಆರಂಭಿಸಿದ ಆಯೋಗ

ಧರ್ಮಸ್ಥಳ ಪ್ರಕರಣ: ರಾಜ್ಯ ಸರ್ಕಾರದಿಂದ ಎಸ್‌ಐಟಿಗೆ 20 ಪೊಲೀಸ್ ಅಧಿಕಾರಿಗಳ ನಿಯೋಜನೆ

ಬಾ ನಲ್ಲ ಮಧುಚಂದ್ರಕೆ ಪ್ರಕರಣ: ಪತಿ ಕೊಂದು ಜೈಲು ಸೇರಿದ್ದ ಸೋನಂ ನಡವಳಿಕೆಗೆ ಶಾಕ್

ಸುಳ್ಳು, ವಂಚನೆ ಮಾಡೋದೇ ಕಾಂಗ್ರೆಸ್ ಸರ್ಕಾರದ ಕೆಲಸ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments