ಪುಡಿ ರಾಜಕಾರಣಿ ಎಂದ ಬಿಕೆ ಹರಿಪ್ರಸಾದ್ ಗೆ ಮುಟ್ಟಿನೋಡಿಕೊಳ್ಳುವ ಹಾಗೆ ತಿರುಗೇಟು ಕೊಟ್ಟ ಪೇಜಾವರಶ್ರೀ

Krishnaveni K
ಸೋಮವಾರ, 28 ಅಕ್ಟೋಬರ್ 2024 (14:35 IST)
Photo Credit: X
ಮಂಗಳೂರು: ಪುಡಿ ರಾಜಕಾರಣಿಗಳಂತೆ ಮಾತನಾಡುತ್ತಾರೆ ಎಂದು ತಮ್ಮ ವಿರುದ್ಧ ನಾಲಿಗೆ ಹರಿಬಿಟ್ಟಿದ್ದ ಕಾಂಗ್ರೆಸ್ ಎಂಎಲ್ ಸಿ ಬಿಕೆ ಹರಿಪ್ರಸಾದ್ ವಿರುದ್ಧ ಪೇಜಾವರಶ್ರೀಗಳು ಖಡಕ್ ತಿರುಗೇಟು ನೀಡಿದ್ದಾರೆ.

ಇತ್ತೀಚೆಗೆ ಜಾತಿಗಣತಿ ಬಗ್ಗೆ ಮಾತನಾಡಿದ್ದ ಪೇಜಾವರಶ್ರೀಗಳನ್ನು ಪುಡಿ ರಾಜಕಾರಣಿ ಎಂದು ಬಿಕೆ ಹರಿಪ್ರಸಾದ್ ಕರೆದಿದ್ದರು. ಜಾತಿಗಣತಿಯ ಅಗತ್ಯವೇನು ಎಂದಿದ್ದ ಶ್ರೀಗಳಿಗೆ ಪುಡಿ ರಾಜಕಾರಣಿಯಂತೆ ಮಾತನಾಡುತ್ತಿದ್ದಾರೆ. ಅಷ್ಟು ರಾಜಕೀಯ ಮಾತನಾಡಬೇಕೆಂದರೆ ಖಾವಿ ಕಳಚಿಟ್ಟು ಬರಲಿ ಎಂದು ಬಿಕೆ ಹರಿಪ್ರಸಾದ್ ಹಗುರವಾಗಿ ಮಾತನಾಡಿದ್ದರು.

ಇದರ ವಿರುದ್ಧ ಶ್ರೀಗಳು ಕಾರ್ಯಕ್ರಮವೊಂದರಲ್ಲಿ ತಿರುಗೇಟು ನೀಡಿದ್ದಾರೆ. ‘ಜಾತಿ ವ್ಯವಸ್ಥೆಯೇ ಎಲ್ಲಾ ಅನಿಷ್ಠಗಳಿಗೂ ಮೂಲ ಎನ್ನುವವರೇ ಜಾತಿ ವ್ಯವಸ್ಥೆಯನ್ನು ಪೋಷಿಸುತ್ತಿದ್ದಾರೆ. ಜಾತಿ ವ್ಯವಸ್ಥೆ ಇರಬಾರದು ಎಂದು ಒಂದು ಕಡೆ ಹೇಳುವವರೇ ಇಂದು ಜಾತಿಗಣತಿ ಮಾಡಲು ಹೊರಟಿದ್ದಾರೆ. ಜಾತಿ ವ್ಯವಸ್ಥೆ ಇರಬಾರದು ಎಂದಾದರೆ ಜಾತಿ ಗಣತಿ ಯಾಕೆ ಬೇಕು ಎಂದು ನಾನು ಕೇಳಿದ್ದೆ. ನಾನೇನು ಯಾರನ್ನೂ ಕರೆದು ಹೀಗೆ ಮಾತನಾಡಲಿಲ್ಲ. ಲೋಕದ ವ್ಯವಸ್ಥೆಯಲ್ಲಿ ನಮ್ಮಲ್ಲಿ ಬಂದು ನಿಮ್ಮ ಅಭಿಪ್ರಾಯ ಏನು ಎಂದು ಕೇಳಿದಾಗ  ಜಾತ್ಯಾತೀತ ಅಂತ ಹೇಳಿಕೊಳ್ಳುವಾಗ ಇಲ್ಲಿ ಜಾತಿ ಪಂಗಡಗಳ ಲೆಕ್ಕಾಚಾರ ಯಾಕೆ ಅನ್ನೋದು ನಮ್ಮ ಅಭಿಪ್ರಾಯ ಎಂದಿದ್ದೆ. ಹೀಗೆ ಹೇಳಿದ್ದನ್ನು ಪುಡಿ ರಾಜಕಾರಣಿ ಎನ್ನುತ್ತಾರೆ. ಹಾಗಾದರೆ ಪ್ರಜಾಪ್ರಭುತ್ವ ವ್ಯವಸ್ಥೆ ನಮ್ಮಲ್ಲಿ ಇರುವುದು ಹೌದೋ, ಅಲ್ವೋ ಹೇಳಲಿ. ಪ್ರಜಾಪ್ರಭುತ್ವ ವ್ಯವಸ್ಥೆ ನಮ್ಮಲ್ಲಿ ಇದೆ ಎಂದಾದರೆ ಇಲ್ಲಿ ಈ ದೇಶದ ಎಲ್ಲಾ ಪ್ರಜೆಗಳಿಗೆ ಮಾತನಾಡಲು ಹಕ್ಕಿದೆ. ಮಠಾಧಿಪತಿ ಎಂದಲ್ಲ, ಸಾಮಾನ್ಯ ಪ್ರಜೆಗೂ ಮಾತನಾಡುವ ಹಕ್ಕಿದೆ. ಹೀಗಿರುವಾಗ ಖಾವಿ ತೆಗೆದು ಬಂದರೆ ಉತ್ತರ ಕೊಡುತ್ತೇನೆ ಎಂದು ಹೇಳುವುದರ ಅರ್ಥವೇನು? ಅಂದರೆ ಸಮಾಜದಲ್ಲಿ ಮಾತನಾಡುವ ಹಕ್ಕು ಇರುವುದು ರಾಜಕಾರಣಗಳಿಗೆ ಮಾತ್ರವಾ? ಪ್ರಜೆಗಳಿಗೆ ಹಕ್ಕಿಲ್ಲ, ರಾಜಕಾರಣಿಗಳಿಗೆ ಮಾತ್ರ ಹಕ್ಕಿದೆ ಎಂದು ಹೇಳಲಿ. ಈಗ ಇರೋದು ಪ್ರಜಾಪ್ರಭುತ್ವ ಅಲ್ಲ, ರಾಜಕಾರಣಿಗಳ ರಾಜ್ಯ ಎಂದು ಹೇಳಲಿ. ಹಾಗಿಲ್ಲ ಅಂತಾದ್ರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪೀಠಾಧಿಪತಿ ಮಾತ್ರವಲ್ಲ, ಸಾಮಾನ್ಯ ಪ್ರಜೆಗೂ ಅಭಿಪ್ರಾಯ ಮಂಡಿಸುವ ಹಕ್ಕಿದೆ’ ಎಂದು ಪೇಜಾವರಶ್ರೀಗಳು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟನೆಲ್ ರೋಡ್ ಹೆಸರಲ್ಲಿ ಜನರ ಜೀವದ ಜೊತೆ ಚೆಲ್ಲಾಟ ಬೇಡ: ಶೋಭಾ ಕರಂದ್ಲಾಜೆ ಎಚ್ಚರಿಕೆ

ಬೆಂಗಳೂರು ಸುರಂಗ ರಸ್ತೆ ನೆಪದಲ್ಲಿ ದುಡ್ಡು ಹೊಡೆಯುವ ಸ್ಕೀಮ್: ಆರ್ ಅಶೋಕ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬಿಹಾರ ಚುನಾವಣೆ ನ್ಯಾಯವಾಗಿ ನಡೆದಿಲ್ಲ ಎಂದ ರಾಹುಲ್ ಗಾಂಧಿ: ವಿದೇಶದಲ್ಲಿ ಕೂತು ನೆಪ ಹೇಳ್ತೀರಿ ಎಂದ ನೆಟ್ಟಿಗರು

ರಾಹುಲ್ ಗಾಂಧಿ ಮತಗಳ್ಳತನ ಹೋರಾಟದ ಕತೆ ಏನಾಗಲಿದೆ

ಮುಂದಿನ ಸುದ್ದಿ
Show comments