Webdunia - Bharat's app for daily news and videos

Install App

ಮಗುವಿನ ಬುದ್ಧಿಮಾಂದ್ಯತೆಗೆ ಕಾರಣವಾದ ಡಯಾಗ್ನೋಸ್ಟಿಕ್ ಸೆಂಟರ್‌ಗೆ ದಂಡ

Webdunia
ಶನಿವಾರ, 3 ಡಿಸೆಂಬರ್ 2022 (13:15 IST)
ಮಂಡ್ಯ : ಸ್ಕ್ಯಾನಿಂಗ್ ವರದಿ ತಪ್ಪು ಕೊಟ್ಟು ಮಗುವಿನ ಬುದ್ಧಿಮಾಂದ್ಯತೆಗೆ ಕಾರಣವಾದ ಡಯಾಗ್ನೋಸ್ಟಿಕ್ ಸೆಂಟರ್ಗೆ 15 ಲಕ್ಷ ರೂ. ದಂಡ ಹಾಕಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆದಿದೆ.

ಮದ್ದೂರಿನ ಡಿ2 ಡಯಾಗ್ನೋಸ್ಟಿಕ್ ಸೆಂಟರ್ಗೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ 15 ಲಕ್ಷ ರೂ. ದಂಡ ಹಾಕಿ ಆದೇಶ ಹೊರಡಿಸಿದೆ.

ಸಿಂಧೂಶ್ರೀ ಅವರು ಮದ್ದೂರಿನ ಸಾರಿಗೆ ಬಸ್ ನಿಲ್ದಾಣದ ಬಳಿ ಇರುವ ಡಿ2 ಡಯಾಗ್ನೋಸ್ಟಿಕ್ ಸೆಂಟರ್ನಲ್ಲಿ ಪರೀಕ್ಷೆ ಮಾಡಿಸಿದ್ದರು. ಭ್ರೂಣದ ಅಸಹಜ ಬೆಳವಣಿಗೆ ಪತ್ತೆ ಹಚ್ಚದೇ ತಪ್ಪು ಸ್ಕ್ಯಾನಿಂಗ್ ವರದಿಯನ್ನು ವೈದ್ಯರು ನೀಡಿದ್ದರು. ಇತ್ತ ಸ್ಕ್ಯಾನಿಂಗ್ ವರದಿ ಆಧರಿಸಿ ಸಿಂಧೂಶ್ರೀಗೆ ಆಸ್ಪತ್ರೆಯ ವೈದ್ಯರು ಚಿಕಿತ್ಸೆ ಮುಂದುವರಿಸಿದ್ದರು. 

ಇದಾದ ಬಳಿಕ ಮಂಡ್ಯ ಮಿಮ್ಸ್ನಲ್ಲಿ ಸಿಂಧೂ ಶ್ರೀಗೆ ಹೆರಿಗೆಯಾಗಿತ್ತು. ಈ ವೇಳೆ ಅಸಹಜವಾಗಿ ಬೆಳವಣಿಗೆಯಾಗಿದ್ದ ಮಗು ಕಂಡು ಪೋಷಕರು ಕಂಗಲಾಗಿದ್ದರು. ಗರ್ಭಿಣಿಯಾದ 20ನೇ ವಾರ ಮಗುವಿನ ಹೃದಯದ ಬಡಿತ, ಕಿಡ್ನಿ, ಮೆದುಳಿನ ಬೆಳವಣಿಗೆ ಬಗ್ಗೆ ಸ್ಕ್ಯಾನಿಂಗ್ನಲ್ಲಿ ಪತ್ತೆ ಹಚ್ಚಲಾಗುತ್ತೆ.

ಆ ವೇಳೆ ಮಗುವಿನ ಅಸಹಜ ಬೆಳವಣಿಗೆ ಕಂಡು ಬಂದರೆ ಕಾನೂನು ಬದ್ಧವಾಗಿ ತೆಗೆಯಲು ಅವಕಾಶ ಇದೆ. ಆದರೆ ಗರ್ಭಿಣಿಯ 20ನೇ ವಾರದ ಸ್ಕ್ಯಾನಿಂಗ್ ಪರೀಕ್ಷೆಯಲ್ಲಿ ತಪ್ಪು ವರದಿ ಕೊಟ್ಟಿದ್ದರು. ಡಯಾಗ್ನೋಸ್ಟಿಕ್ ಸೆಂಟರ್ನ ವೈದ್ಯರು ಸ್ಕ್ಯಾನಿಂಗ್ ತಪ್ಪು ವರದಿ ಕಾರಣ ಇದೀಗ ಈ ಸಮಸ್ಯೆ ಉಂಟಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments