Webdunia - Bharat's app for daily news and videos

Install App

ಅಸಂಘಟಿತ ಕಾರ್ಮಿಕರಿಗೆ ಪಿಂಚಣಿ ಯೋಜನೆ

Webdunia
ಶುಕ್ರವಾರ, 1 ಫೆಬ್ರವರಿ 2019 (15:52 IST)
ಲೋಕಸಭೆಯಲ್ಲಿ 2019 – 20ನೇ ಸಾಲಿನ ಕೇಂದ್ರ ಬಜೆಟ್ ನ್ನು ಮಂಡಿಸಿದ ಹಣಕಾಸು ಸಚಿವ ಪಿಯೂಷ್ ಗೋಯಲ್, ಅಸಂಘಟಿತ ಕಾರ್ಮಿಕರಿಗೆ ಪಿಂಚಣಿ ಯೋಜನೆ ಪ್ರಕಟಿಸಿದ್ದಾರೆ.

ಅಸಂಘಟಿತ ವಲಯದಲ್ಲಿ ಕಾರ್ಮಿಕರಿಗೆ ಬೃಹತ್ ಪಿಂಚಣಿ ಯೋಜನೆಯನ್ನು ಘೋಷಣೆ ಮಾಡಲಾಗಿದೆ. ಇದರ ಅಡಿಯಲ್ಲಿ 10 ಕೋಟಿ ಜನರಿಗೆ ಸೌಲಭ್ಯ ದೊರೆಯಲಿದೆ., 60 ವರ್ಷದ ಮೇಲಿನ ಕಾರ್ಮಿಕರಿಗೆ ಮಾಸಿಕ 3ಸಾವಿರ ರೂ. ಪಿಂಚಣಿ ದೊರೆಯಲಿದೆ ಎಂದು ಪ್ರಕಟಿಸಿದರು.

ಪ್ರಧಾನ ಮಂತ್ರಿ ಶ್ರಮಯೋಗಿ ಮಂದನ್ ಯೋಜನೆಗೆ ನಾವು ಚಾಲನೆ ನೀಡುತ್ತಿದ್ದು, ಇದರ ಅಡಿಯಲ್ಲಿ ಅಸಂಘಟಿತ ವಲಯದಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಮಾಸಿಕ 3 ಸಾವಿರ ರೂ. ಪಿಂಚಣಿ ನೀಡಲಾಗುವುದು ಎಂದರು. ಈ ಯೋಜನೆಯ ಲಾಭ ಪಡೆಯಲು ಕಾರ್ಮಿಕರು ಮಾಸಿಕ 100 ರೂ. ಗಳನ್ನು ಪಾವತಿಸಬೇಕಾಗುತ್ತದೆ ಎಂದು ಅವರು ಹೇಳಿದರು. 10 ಕೋಟಿ ಕಾರ್ಮಿಕರಿಗೆ ಇದರ ಲಾಭ ಸಿಗಲಿದೆ. ಅಸಂಘಟಿತ ವಲಯದಲ್ಲಿನ ಕಾರ್ಮಿಕರಿಗೆ ಪ್ರಕಟಿಸಲಾಗಿರುವ ವಿಶ್ವದ ಅತಿದೊಡ್ಡ ಪಿಂಚಣಿ ಯೋಜನೆ ಇದಾಗಲಿದೆ ಎಂದು ಅವರು ಆಶಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆಯ ಮುನ್ಸೂಚನೆ: ಜಿಯಾಂಗ್ಸಿಯಲ್ಲಿ ಚೀನಾ ಪ್ರವಾಹ ಎಚ್ಚರಿಕೆ

ವಿವಾದಿತ ಪಾರ್ಕ್ ತಿದ್ದುಪಡಿ ಮಸೂದೆ ವಾಪಾಸ್‌: ಹೋರಾಟಕ್ಕೆ ಸಿಕ್ಕ ಜಯ ಎಂದ ವಿಜಯೇಂದ್ರ

ಭಾರತದ ಆರ್ಥಿಕ ಬೆಳವಣಿಗೆ ಜಗತ್ತಿಗೆ ವಿಶ್ವಾಸದ ಮೂಲ: ಪ್ರಧಾನಿ ಮೋದಿ

ಸಮೀಕ್ಷೆಯಲ್ಲಿ ಅಡಚಣೆ, ಗೃಹಜ್ಯೋತಿ ಪರಿಶೀಲನಾ ಗಡುವು ಸೆಪ್ಟೆಂಬರ್ ಅಂತ್ಯದವರೆಗೆ ವಿಸ್ತರಣೆ

ಕರ್ತವ್ಯದಲ್ಲಿದ್ದ ಪಿಎಸ್‌ಐಗೆ ಕಪಾಳಮೋಕ್ಷ, ಎಂಎಲ್‌ಎ ಸುರೇಶ್ ಪುತ್ರಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಮುಂದಿನ ಸುದ್ದಿ
Show comments