Webdunia - Bharat's app for daily news and videos

Install App

ಅಪಘಾತ ತಡೆಯುವ ನಿಟ್ಟಿನಲ್ಲಿ ಸಂಚಾರಿ ಪೊಲೀಸರ ಕಾರ್ಯಕ್ಕೆ ಜನರ ಮೆಚ್ಚುಗೆ

Webdunia
ಮಂಗಳವಾರ, 18 ಅಕ್ಟೋಬರ್ 2022 (19:00 IST)
ಬೆಂಗಳೂರು ಮಹಾ ನಗರದ ಹೆಬ್ಬಾಗಿಲು ಅಂದ್ರೆ ಅದು ನೆಲಮಂಗಲ ಸಿಟಿ. ನಗರದಿಂದ ರಾಜ್ಯದ ಸುಮಾರು 17 ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಎರಡು ರಾಷ್ಟ್ರೀಯ ಹೆದ್ದಾರಿ ಸಂಪರ್ಕಿಸುವ ಈ ಜಂಕ್ಷನ್ ನಲ್ಲಿ ಮಳೆಯ ನೀರಿನಿಂದ ಮಂಡಿಯುದ್ದದ ಗುಂಡಿಗಳದ್ದೇ ಕಾರುಬಾರು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಟೋಲ್ ಕಂಪನಿಯ ನಿರ್ಲಕ್ಷ್ಯದಿಂದ ಗುಂಡಿಗಳನ್ನ ಮುಚ್ಚದೆ ಇದ್ದು ಪ್ರತಿನಿತ್ಯ ಇಲ್ಲಿ ವಾಹನಗಳು ಅಪಘಾತವಾಗಿ ಸವಾರರು ಜನರು ಸಂಕಷ್ಟಕ್ಕೆ ಸಿಲುಕಿ ಪರದಾಡುವಂತಾಗಿತ್ತು.
 
 ಪ್ರತಿನಿತ್ಯ ಈ ನೆಲಮಂಗಲದ ಕುಣಿಗಲ್ ಬೈಪಾಸ್ ಜಂಕ್ಷನ್ ನಲ್ಲಿ ವಾಹನಗಳ ದಟ್ಟಣೆಯಿಂದ ಟ್ರಾಫಿಕ್ ಜಾಮ್ ಹೆಚ್ಚಾಗಿ ಸಂಚಾರಿ ಪೊಲೀಸರು ಹರಸಾಹಸ ಪಡುತ್ತಾರೆ, ಅದರಲ್ಲೂ ಶನಿವಾರ ಭಾನುವಾರ ಹೆಚ್ಚಿನ ಪ್ರಮಾಣದಲ್ಲಿ ಟ್ರಾಫಿಕ್ ದಟ್ಟಣೆ ಸಾಮಾನ್ಯವಾಗಿವೆ. ಅಪಘಾತ ತಡೆಯುವ ನಿಟ್ಟಿನಲ್ಲಿ ಸಂಚಾರಿ ಠಾಣೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಹೋಮ್ ಗಾಡ್೯ ಸಿಬ್ಬಂದಿ ಶಬ್ಬೀರ್ ಹಾಗೂ ಸಿಬ್ಬಂದಿಗಳು ಸೇರಿ ಮಂಡಿಯುದ್ದದ ಗುಂಡಿಗಳನ್ನ ಸಿಮೆಂಟ್ ಕಾಂಕ್ರೀಟ್ ಹಾಕಿ ಜನರ ಮೆಚ್ಚುಗೆ ಪಾತ್ರರಾಗಿದ್ದಾರೆ. ಇನ್ನೂ ಈ ಗುಂಡಿಗಳಿಗೆ ಟೋಲ್ ರಸ್ತೆಯಲ್ಲಿ ನೀರಿನ ಪೈಪ್ ಹಾಳಾಗಿದ್ದು ನೀರು ಬಿದ್ದು ಬಿದ್ದು ಅನಾಹುತಕ್ಕೆ ಕಾರಣವಾಗಿದೆ. 
 
ನೆಲಮಂಗಲ ಸಂಚಾರಿ ಪೊಲೀಸರ ಕಾರ್ಯ ನಿಜಕ್ಕೂ ಶ್ಲಾಘನೀಯವಾಗಿದ್ದು ವಾಹನ ಸವಾರರು ಹಾಗೂ ಸ್ಥಳೀಯ ಜನರ ಮೆಚ್ಚುಗೆ ಪಾತ್ರವಾಗಿದೆ. ಏನನ್ನಾದರೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಟೋಲ್ ಕಂಪನಿ ಇಂತಹ ಅಪಾಯಕಾರಿ ಗುಂಡಿಗಳನ್ನ ಮುಚ್ಚಿಸುವ ಕೆಲಸಕ್ಕೆ ಮುಂದಾಗಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments