Webdunia - Bharat's app for daily news and videos

Install App

ಅಪಘಾತ ತಡೆಯುವ ನಿಟ್ಟಿನಲ್ಲಿ ಸಂಚಾರಿ ಪೊಲೀಸರ ಕಾರ್ಯಕ್ಕೆ ಜನರ ಮೆಚ್ಚುಗೆ

Webdunia
ಮಂಗಳವಾರ, 18 ಅಕ್ಟೋಬರ್ 2022 (19:00 IST)
ಬೆಂಗಳೂರು ಮಹಾ ನಗರದ ಹೆಬ್ಬಾಗಿಲು ಅಂದ್ರೆ ಅದು ನೆಲಮಂಗಲ ಸಿಟಿ. ನಗರದಿಂದ ರಾಜ್ಯದ ಸುಮಾರು 17 ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಎರಡು ರಾಷ್ಟ್ರೀಯ ಹೆದ್ದಾರಿ ಸಂಪರ್ಕಿಸುವ ಈ ಜಂಕ್ಷನ್ ನಲ್ಲಿ ಮಳೆಯ ನೀರಿನಿಂದ ಮಂಡಿಯುದ್ದದ ಗುಂಡಿಗಳದ್ದೇ ಕಾರುಬಾರು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಟೋಲ್ ಕಂಪನಿಯ ನಿರ್ಲಕ್ಷ್ಯದಿಂದ ಗುಂಡಿಗಳನ್ನ ಮುಚ್ಚದೆ ಇದ್ದು ಪ್ರತಿನಿತ್ಯ ಇಲ್ಲಿ ವಾಹನಗಳು ಅಪಘಾತವಾಗಿ ಸವಾರರು ಜನರು ಸಂಕಷ್ಟಕ್ಕೆ ಸಿಲುಕಿ ಪರದಾಡುವಂತಾಗಿತ್ತು.
 
 ಪ್ರತಿನಿತ್ಯ ಈ ನೆಲಮಂಗಲದ ಕುಣಿಗಲ್ ಬೈಪಾಸ್ ಜಂಕ್ಷನ್ ನಲ್ಲಿ ವಾಹನಗಳ ದಟ್ಟಣೆಯಿಂದ ಟ್ರಾಫಿಕ್ ಜಾಮ್ ಹೆಚ್ಚಾಗಿ ಸಂಚಾರಿ ಪೊಲೀಸರು ಹರಸಾಹಸ ಪಡುತ್ತಾರೆ, ಅದರಲ್ಲೂ ಶನಿವಾರ ಭಾನುವಾರ ಹೆಚ್ಚಿನ ಪ್ರಮಾಣದಲ್ಲಿ ಟ್ರಾಫಿಕ್ ದಟ್ಟಣೆ ಸಾಮಾನ್ಯವಾಗಿವೆ. ಅಪಘಾತ ತಡೆಯುವ ನಿಟ್ಟಿನಲ್ಲಿ ಸಂಚಾರಿ ಠಾಣೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಹೋಮ್ ಗಾಡ್೯ ಸಿಬ್ಬಂದಿ ಶಬ್ಬೀರ್ ಹಾಗೂ ಸಿಬ್ಬಂದಿಗಳು ಸೇರಿ ಮಂಡಿಯುದ್ದದ ಗುಂಡಿಗಳನ್ನ ಸಿಮೆಂಟ್ ಕಾಂಕ್ರೀಟ್ ಹಾಕಿ ಜನರ ಮೆಚ್ಚುಗೆ ಪಾತ್ರರಾಗಿದ್ದಾರೆ. ಇನ್ನೂ ಈ ಗುಂಡಿಗಳಿಗೆ ಟೋಲ್ ರಸ್ತೆಯಲ್ಲಿ ನೀರಿನ ಪೈಪ್ ಹಾಳಾಗಿದ್ದು ನೀರು ಬಿದ್ದು ಬಿದ್ದು ಅನಾಹುತಕ್ಕೆ ಕಾರಣವಾಗಿದೆ. 
 
ನೆಲಮಂಗಲ ಸಂಚಾರಿ ಪೊಲೀಸರ ಕಾರ್ಯ ನಿಜಕ್ಕೂ ಶ್ಲಾಘನೀಯವಾಗಿದ್ದು ವಾಹನ ಸವಾರರು ಹಾಗೂ ಸ್ಥಳೀಯ ಜನರ ಮೆಚ್ಚುಗೆ ಪಾತ್ರವಾಗಿದೆ. ಏನನ್ನಾದರೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಟೋಲ್ ಕಂಪನಿ ಇಂತಹ ಅಪಾಯಕಾರಿ ಗುಂಡಿಗಳನ್ನ ಮುಚ್ಚಿಸುವ ಕೆಲಸಕ್ಕೆ ಮುಂದಾಗಬೇಕಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments