Publish Date: Sun, 16 Oct 2022 (13:04 IST)
Updated Date: Sun, 16 Oct 2022 (15:05 IST)
ರಾಯಚೂರು : ಗ್ರಾಮ ವಾಸ್ತವ್ಯದಿಂದ ನಮಗೆ ನ್ಯಾಯ ಸಿಗುತ್ತದೆ ಅನ್ನೋ ನಂಬಿಕೆ ಗ್ರಾಮೀಣ ಭಾಗದ ಜನರಲ್ಲಿ ಮೂಡುತ್ತಿದೆ.
ಅಧಿಕಾರಿಗಳು ಇನ್ನಷ್ಟು ಶ್ರಮಪಟ್ಟರೆ ಜನರಿಗೆ ಇನ್ನೂ ಅನುಕೂಲವಾಗುತ್ತದೆ ಅಂತ ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.
ಜಿಲ್ಲೆಯ ದೇವದುರ್ಗದ ಅರಕೇರಾದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ಹಿನ್ನೆಲೆ ಗ್ರಾಮವಾಸ್ತವ್ಯ ಮುಗಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಆರ್.ಅಶೋಕ್ ಅವರು,
ಗ್ರಾಮ ವಾಸ್ತವ್ಯ ವೇಳೆಯೇ ಸೈನಿಕರಿಗೆ ಆರೂವರೆ ಎಕರೆ ಜಮೀನು ಮಂಜೂರು ಮಾಡಲಾಗಿದೆ. ಈ ಗ್ರಾಮ ವಾಸ್ತವ್ಯದಿಂದ 17 ಸಾವಿರ ಜನರಿಗೆ ಅನುಕೂಲವಾಗಿದೆ ಎಂದು ತಿಳಿಸಿದರು.