Webdunia - Bharat's app for daily news and videos

Install App

ಸಿದ್ದರಾಮಯ್ಯರ ಇನ್ನೊಂದು ಮುಖ ಜನತೆಗೆ ಗೊತ್ತಿಲ್ಲ: ಶ್ರೀನಿವಾಸ್ ಪ್ರಸಾದ್

Webdunia
ಮಂಗಳವಾರ, 27 ಡಿಸೆಂಬರ್ 2016 (12:27 IST)
ಮುಖ್ಯಮಂತ್ರಿ ಸಿದ್ದರಾಮಯ್ಯರ ಒಂದು ಮುಖ ಮಾತ್ರ ಗೊತ್ತು. ಆದರೆ, ಅವರ ಇನ್ನೊಂದು ಮುಖ ರಾಜ್ಯದ ಜನತೆಗೆ ಗೊತ್ತಿಲ್ಲ ಎಂದು ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ. 
ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಜಾತಿಗಣತಿಯಲ್ಲಿ ಏನೆಂದು ಬರೆಸಿದ್ದೀರಾ? ನನ್ನ ಧರ್ಮ ಹಿಂದೂ ಎಂದು ಬರೆಸಿಲ್ಲವೇ? ಮತ್ತೇಕೆ ಹಿಂದೂ ಧರ್ಮದಲ್ಲಿ ಸಮಾನತೆ ಇಲ್ಲ ಎಂದು ಹೇಳುತ್ತೀರಾ ಎಂದು ನೇರವಾಗಿ ಪ್ರಶ್ನಿಸಿದರು.
 
ಮೊದಲು ಜಾತ್ಯಾತೀತ ಎಂದರೆ ಏನೆಂದು ತಿಳಿದುಕೊಳ್ಳಿ. ನಜನಗೂಡು ಉಪಚುನಾವಣೆಗೆ ವಿಶ್ವಗರು ಬಸವಣ್ಣ, ಡಾ. ಅಂಬೇಡ್ಕರ್ ಹಾಗೂ ಬುದ್ಧನನ್ನು ಏಕೆ ಎಳೆದು ತರುತ್ತಿದ್ದೀರಾ?. ನಿಮ್ಮ ಕ್ಷೇತ್ರದಲ್ಲಿಯೇ ದಲಿತ ಮಹಿಳೆಯರು ಮಾಡಿದ ಅಡುಗೆಯನ್ನು ತಿನ್ನುತ್ತಿಲ್ಲ. ಅಹಿಂದ ಹೆಸರಿನಲ್ಲಿ ಅಧಿಕಾರ ಹಿಡಿದಿರುವ ಸಿಎಂ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದಾರಾ? ಆ ಸಮಸ್ಯೆಯನ್ನು ಪರಿಹರಿಸಿದ್ದು ನಾವು ಎಂದು ಕಿಡಿಕಾರಿದರು. 
 
ಮಹದೇವಪ್ಪ ಸೂಟಕೇಸ್ ಮಂತ್ರಿ....
 
ರಾಜ್ಯ ಸರಕಾರದಲ್ಲಿ ಎಐಸಿಸಿಗೆ ಸೂಟಕೇಸ್ ಕೊಡಲು ಒಬ್ಬ ಮಂತ್ರಿ ಇದ್ದಾರೆ ಎಂದು ಸಚಿವ ಮಹದೇವಪ್ಪ ಅವರಿಗೆ ಟಾಂಗ್ ನೀಡಿದರು.
 
ನೈತಿಕತೆ ಇಲ್ಲದ ಖರ್ಗೆ.....
 
ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆಗೆ ನೈತಿಕತೆ ಕುಸಿದಿದೆ. ದಲಿತರ ಕುರಿತು ಮಲ್ಲಿಕಾರ್ಜುನ್ ಖರ್ಗೆ ಅವರು ಯಾವತ್ತಾದರೂ ಚರ್ಚಿಸಿದ್ದಾರಾ ಎಂದು ಪ್ರಶ್ನಿಸಿದರು.
 
ಗೃಹ ಸಚಿವ ಮೂಗ, ಕಿವುಡು ಶಾಲೆಯ ಹೆಡ್ ಮಾಸ್ತರ್....
 
ಕೆಪಿಸಿಸಿ ಅಧ್ಯಕ್ಷ ಹಾಗೂ ಗೃಹ ಸಚಿವರಾಗಿರುವ ಡಾ.ಜಿ.ಪರಮೇಶ್ವರ್ ಮೂಗ ಹಾಗೂ ಕಿವುಡರು ಶಾಲೆಯ ಹೆಡ್‌ಮಾಸ್ತರ್‌ನಂತೆ ವರ್ತಿಸುತ್ತಿದ್ದಾರೆ ಎಂದು ಸಚಿವ ಶ್ರೀನಿವಾಸ್ ಪ್ರಸಾದ್ ವ್ಯಂಗ್ಯವಾಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ 52ನೇ ಸಿಜೆಐ ಆಗಿ ನೇಮಕಗೊಂಡ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಹಿನ್ನಲೆ ಇಲ್ಲಿದೆ

Prajwal Revanna: ವಕೀಲರನ್ನೂ ನೇಮಿಸಿಕೊಂಡಿಲ್ಲ: ಪ್ರಜ್ವಲ್ ರೇವಣ್ಣ ಪರಿಸ್ಥಿತಿ ಏನಾಗಿದೆ ನೋಡಿ

PM Modi: ಉಗ್ರರ ದಮನಕ್ಕೆ ಸೇನೆಗೆ ಸಂಪೂರ್ಣ ಪವರ್ ಕೊಟ್ಟ ಪ್ರಧಾನಿ ಮೋದಿ

K Annamalai: ಮೋದಿ, ಅಮಿತ್ ಶಾ ಹೆಸರಲ್ಲಿ ಅಮೆರಿಕದಲ್ಲಿ ಅಣ್ಣಾಮಲೈ ವಿಶೇಷ ಪೂಜೆ

ಉಗ್ರರ ಹಿಮ್ಮೆಟ್ಟಿಸಲು ಐಕ್ಯತೆ ಅವಶ್ಯಕ: ಮಾಜಿ ಪ್ರಧಾನಿ ದೇವೇಗೌಡ

ಮುಂದಿನ ಸುದ್ದಿ
Show comments