Webdunia - Bharat's app for daily news and videos

Install App

ಅಪಘಾತದಲ್ಲಿ ಎಣ್ಣೆಗಾಗಿ ಮುಗಿಬಿದ್ದ ಜನರು

Webdunia
ಭಾನುವಾರ, 16 ಸೆಪ್ಟಂಬರ್ 2018 (20:01 IST)
ಎಣ್ಣೆ ತುಂಬಿದ ಕ್ಯಾಂಟರ್ ವಾಹನಕ್ಕೆ ಹಿಂಬದಿಯಿಂದ ಲಾರಿ ಡಿಕ್ಕಿಯಾದ ಪರಿಣಾಮ, ಅಪಘಾತದಲ್ಲಿ ಲಾರಿ ಚಾಲಕನನ್ನ ರಕ್ಷಿಸಿ ಆಸ್ಪತ್ರೆಗೆ ಸಾಗಿಸಲು ಮುಂದಾಗದ ಜನ  ಮಾನವೀಯತೆ ಮರೆತು ಕ್ಯಾಂಟರ್ ನಲ್ಲಿ ಸೋರುತ್ತಿದ್ದ ಎಣ್ಣೆಗಾಗಿ ಮುಗಿಬಿದ್ದ ಘಟನೆ ನಡೆದಿದೆ.

ಲಾರಿ ಚಾಲಕನ ಸಾವಿಗೆ ಕಾರಣವಾದ ಅಮಾನವೀಯ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ನಡೆದಿದೆ. ಇಳಕಲ್ ನಗರದ ಮುದಗಲ್ ಕ್ರಾಸ್ ಬಳಿ ಈ ದುರ್ಘಟನೆ ಸಂಭವಿಸಿದ್ದು, ಅಡುಗೆ ಎಣ್ಣೆ ತುಂಬಿದ ಕ್ಯಾಂಟರ್ ವಾಹನ ಇಳಕಲ್ ನಿಂದ ಹುನಗುಂದ ಮಾರ್ಗವಾಗಿ ಬರುತ್ತಿರುವಾಗ ಕ್ಯಾಂಟರ್ ವಾಹನಕ್ಕೆ  ಹಿಂಬದಿಯಿಂದ ಲಾರಿ ಡಿಕ್ಕಿಯಾಗಿದೆ. ಪರಿಣಾಮ ಈ ಅಫಘಾತದಲ್ಲಿ ಲಾರಿಯಲ್ಲಿ ಚಾಲಕ ಸಿಲುಕಿ ಹಾಕಿಕೊಂಡು ಜೀವನ್ಮರಣದ ಮಧ್ಯೆ ಹೋರಾಡುತ್ತಿದ್ದ. ಆದರೆ ಚಾಲಕನನ್ನ ರಕ್ಷಿಸಲು‌ ಮುಂದಾಗದ ಜನ್ರು, ಮಾನವೀಯತೆ ಮರೆತು, ಕೊಡ, ಕ್ಯಾನ್, ಬಕೇಟ್ ನೊಂದಿಗೆ ಬಂದು, ಸೋರುತ್ತಿದ್ದ ಅಡುಗೆ ಎಣ್ಣೆ ತುಂಬಿಸಿಕೊಳ್ಳಲು ಮುಗಿಬಿದ್ದರು. 

ಅಡುಗೆ ಎಣ್ಣೆಗಾಗಿ ‌ಮುಗಿಬಿದ್ದ ಜನರನ್ನು ಚದುರಿಸಿ ಸಂಚಾರವನ್ನು ಪೊಲೀಸರು ಸುಗಮಗೊಳಿಸಿದರು. ಆದ್ರೆ ಆಸ್ಪತ್ರೆ ಮುಟ್ಟುವಷ್ಟರಲ್ಲಿ ಲಾರಿ ಚಾಲಕನ ಪ್ರಣಾಪಕ್ಷಿ ಹಾರಿಹೋಗಿದೆ‌. ಈ ಕುರಿತು ಇಳಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

ಮುಂದಿನ ಸುದ್ದಿ
Show comments