Webdunia - Bharat's app for daily news and videos

Install App

ಭಾರೀ ಮಳೆಯಿಂದ ಕತ್ತಲಲ್ಲಿ ಕಾಲ ಕಳೆಯುತ್ತಿರುವ 736 ಹಳ್ಳಿಗಳ ಜನರು!

Webdunia
ಮಂಗಳವಾರ, 21 ಆಗಸ್ಟ್ 2018 (14:58 IST)
ಕಳೆದ ಒಂದು ತಿಂಗಳಿಂದ ಆ ಜಿಲ್ಲೆಯಲ್ಲಿ ಸುರಿದ ವ್ಯಾಪಕ ಮಳೆ ಭಾರೀ ಅನಾಹುತವನ್ನೇ ಸೃಷ್ಠಿಸಿದೆ. ಇದರ ಪರಿಣಾಮವನ್ನು ಇಂದಿಗೂ ಮಲೆನಾಡಿನ ಜನರು ಅನುಭವಿಸುತ್ತಿದ್ದಾರೆ. ಬರೋಬ್ಬರಿ 736 ಗ್ರಾಮಗಳು ಕಗ್ಗತ್ತಲ್ಲಿ ಮುಳುಗಿವೆ. ಎಲ್ಲೆಡೆ ಸಂಪೂರ್ಣ ಸಂಪರ್ಕವೇ ಕಳೆದುಹೋದಂತಾಗಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ 88 ಕೋಟಿಗೂ ಅಧಿಕ  ಆಸ್ತಿ-ಪಾಸ್ತಿ ಮಳೆಯಿಂದ ಇದುವರೆಗೂ ನಷ್ಟವಾಗಿದೆ. ಇದರಲ್ಲಿ ಮೆಸ್ಕಾಂಗೆ ಅತಿಹೆಚ್ಚು ಹಾನಿಯುಂಟಾಗಿದೆ. ದಶಕದ ನಂತರ ಮತ್ತೆ ಮಲೆನಾಡಿನಲ್ಲಿ ಮಳೆ ಆರ್ಭಟಿಸಿದ್ದು, ಚಿಕ್ಕಮಗಳೂರು ಜಿಲ್ಲೆಯ ಮೂರು ತಾಲೂಕುಗಳಲ್ಲಿ ಅತಿವೃಷ್ಟಿಯನ್ನೇ ಸೃಷ್ಠಿಸಿದೆ. ಶೃಂಗೇರಿ ಪಟ್ಟಣವೇ ನಾಲ್ಕೈದು ಬಾರಿ ಮುಳುಗಿ ಎಲ್ಲೆಡೆ ವ್ಯಾಪಕ ಅವಾಂತರವನ್ನೇ ತಂದಿಟ್ಟಿದೆ. ವರುಣನ ಸ್ಫೋಟಕ್ಕೆ ತತ್ತರಿಸಿರುವ ಮಲೆನಾಡಿನ ಜನರು ಇನ್ನೂ ಸುಧಾರಿಸಿಕೊಂಡಿಲ್ಲ. ಜಿಲ್ಲೆಯಲ್ಲಿ 736 ಗ್ರಾಮಗಳು ವಿದ್ಯುತ್ ಸಂಪರ್ಕವನ್ನೇ ಕಳೆದುಕೊಂಡಿವೆ. ಕತ್ತಲಲ್ಲೇ ಬದುಕು ಸಾಗಿಸುವಂತೆ ಮಾಡಿದೆ.

ಎಲ್ಲೆಲ್ಲೂ ಮಳೆಯ ಹೊಡೆತಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ನೇರ ಪರಿಣಾಮ ವಿದ್ಯುತ್ ಸಂಪರ್ಕದ ಮೇಲೆ ಬಿದ್ದಿದೆ. ಎಲ್ಲೆಂದರಲ್ಲಿ ವಿದ್ಯುತ್ ಕಂಬಗಳು ಧರೆಗುರುಳಿದ್ದು, ವಿದ್ಯುತ್ ತಂತಿಗಳು ತುಂಡು ತುಂಡಾಗಿ ಬಿದ್ದು  ಸಾವಿರಾರು ಮನೆಗಳ ಮೀಟರ್ ಬಾಕ್ಸ ಗಳು ಕೆಟ್ಟು ಹೋಗಿವೆ. ಇದು ಇಡೀ ಮಲೆನಾಡನ್ನು ಕಗ್ಗತ್ತಲಲ್ಲಿ ಮುಳುಗುವಂತೆ ಮಾಡಿದೆ. ಜನರು ರಾತ್ರಿ ಬಂತು ಎಂದರೆ ಜೀವ ಕೈಯಲ್ಲಿ ಹಿಡಿದು ಮಲಗುವ ದುಸ್ಥಿತಿ ಎದುರಾಗಿದೆ.

ಇಡೀ ಮಲೆನಾಡನ್ನು ಕತ್ತಲಲ್ಲಿ ಮುಳುಗಿಸಿರುವ ವರುಣನ ರೌದ್ರ ನರ್ತನ ತಹಬದಿಗೆ ಬರಲು ಇನ್ನೂ ಸಾಕಷ್ಟು ದಿನಗಳು ಬೇಕು ಎನ್ನುವ ಅಧಿಕಾರಿಗಳು, ನಿರಂತರ ಮಳೆ ಮುಂದುವರೆದಿರುವುದು ಹಾನಿ ಪರಿಹಾರ ಕಾಮಗಾರಿಗೆ ಹಿನ್ನಡೆ ಉಂಟುಮಾಡಿದೆ. ಅಧಿಕಾರಿಗಳು ಸರ್ಕಾರಕ್ಕೆ ಹೆಚ್ಚಿನ ಹಣಕ್ಕೆ ಪ್ರಸ್ತಾವನೆ ಸಲ್ಲಿಸಿ ಕಾಯುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾತೃಪಕ್ಷಕ್ಕೆ ಮೋಸಮಾಡಿದ ಸಿದ್ದರಾಮಯ್ಯನವರು ಹೆತ್ತ ತಾಯಿಗೆ ಮಾಡಿದ ದ್ರೋಹಕ್ಕೆ ಸಮ: ನಿಖಿಲ್ ಕುಮಾರಸ್ವಾಮಿ

ಇರಾನ್ ದಾಳಿ ಬೆನ್ನಲ್ಲೇ ಅಮೆರಿಕ ಪ್ರವಾಸ ಕೈಗೊಂಡ ಇಸ್ರೇಲ್‌ ಪ್ರಧಾನಿ ನೆತನ್ಯಾಹು

ಬೆಲೆ ಏರಿಕೆಯ ಮಧ್ಯೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ₹58.50ಕಡಿತ

ಕೈಲಾಗದವನು ಮೈಪರಚಿಕೊಂಡ, ಕೋವಿಡ್ ಲಸಿಕೆ ಬಿಜೆಪಿ ಲಸಿಕೆಯಲ್ಲ: ಸಿಎಂಗೆ ಟಾಂಗ್ ಕೊಟ್ಟ ಆರ್‌ ಅಶೋಕ್‌

ಏರ್‌ ಇಂಡಿಯಾ ವಿಮಾನ ದುರಂತ: ವಾರದೊಳಗೆ ಪ್ರಾಥಮಿಕ ವರದಿ ಹೊರಬೀಳುವ ಸಾಧ್ಯತೆ

ಮುಂದಿನ ಸುದ್ದಿ
Show comments