ಉಸ್ತುವಾರಿ ಸಚಿವರ ಸ್ವಕ್ಷೇತ್ರದಿಂದಲೇ ಗುಳೆ ಹೊರಟ ಜನ!

Webdunia
ಭಾನುವಾರ, 3 ಫೆಬ್ರವರಿ 2019 (19:51 IST)
ಭೀಕರ ಬರಗಾಲದಿಂದ ತತ್ತರಿಸಿರುವ ಜನ ತಮ್ಮ ಹೊಟ್ಟೆಪಾಡಿಗಾಗಿ ಗುಳೆ ಹೋಗುತ್ತಿರುವ ಪರಿಸ್ಥಿತಿ ಮತ್ತೆ ನಿರ್ಮಾಣವಾಗಿದೆ.

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ಗುಳೆ ಹೋಗುವುದು ಸರ್ವೇ ಸಾಮಾನ್ಯವಾಗಿದೆ.

ಹೇಳುವುದಕ್ಕೆ ಮಾತ್ರ ಇದು ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ್ ನಾಡಗೌಡರ ಸ್ವಕ್ಷೇತ್ರ. ಆದರೆ ಇಲ್ಲಿ ಸರಿಯಾದ ಮೂಲಭೂತ ಸೌಕರ್ಯಗಳಿಲ್ಲ. ಈ ಬಾರಿ ಮಳೆ ಕೈಕೊಟ್ಟಿರುವ ಕಾರಣ, ಅನ್ನದಾತ ರೋಸಿ ಹೋಗಿದ್ದಾನೆ. ಕೃಷಿಯನ್ನೇ ನಂಬಿಕೊಂಡಿದ್ದ ಅನೇಕ ರೈತರು, ಕೂಲಿಕಾರರು, ಕುಟುಂಬ ಸಮೇತವಾಗಿ ಗಂಟು‌ ಮೂಟ್ಟೆ ಕಟ್ಟಿಕೊಂಡು ಕೂಲಿ ಕೆಲಸಕ್ಕೆ ರಾಜ್ಯ ರಾಜಧಾನಿ ಹಾಗೂ ಪರ ರಾಜ್ಯಗಳತ್ತ ಕಡೆ ಮುಖ ಮಾಡುತ್ತಿದ್ದಾರೆ. 

ಗ್ರಾಮದಿಂದ ಸುಮಾರು 40ಕ್ಕೂ ಹೆಚ್ಚು ಜನ, ವಯೋವೃದ್ಧರನ್ನ ಮನೆಯಲ್ಲೇ ಬಿಟ್ಟು, ಮಕ್ಕಳೊಂದಿಗೆ ತುತ್ತಿನ ಚೀಲ ತುಂಬಿಸಿಕೊಳ್ಳುವುದಕ್ಕೆ ಬೆಂಗಳೂರಿಗೆ ತೆರಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲದೇ ತುಂಗಭದ್ರಾ ನದಿಯಿಂದ 2ನೇ  ಬೆಳೆಗೆ ನೀರು‌ ಬಿಡಲು ಸಾಧ್ಯವಿಲ್ಲವೆಂದು ಹೇಳಿರುವ ಕಾರಣ ರೈತರಿಗೆ ಗಾಯದ ಮೇಲೆ ಬರೆ ಎಳದಂತಾಗಿದೆ. ಹಿಂದಿನಿಂದಲೂ ಜಿಲ್ಲೆಯಲ್ಲಿ ಗುಳೆ ಹೋಗುವ ಪದ್ಧತಿ ಇದ್ದು, ಆಳುವ ಸರ್ಕಾರದ ಸಚಿವರ ಸ್ವಕ್ಷೇತ್ರದಲ್ಲಿ ಇಂತಹ‌ ಪರಿಸ್ಥಿತಿಯಾದರೇ ಬೇರೆ ಕ್ಷೇತ್ರಗಳ ಗತಿಯೇನು ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಸಂಕಲ್ಪನೂ ಈಡೇರುತ್ತೆ, ಡಿಕೆಶಿ ಸಿಎಂ ಆಗುತ್ತಾರೆ: ಜನಾರ್ದನ ರೆಡ್ಡಿ

ಇದಕ್ಕೆಲ್ಲ ಖರ್ಗೆ, ರಾಹುಲ್ ಗಾಂಧಿ ಪರಿಹಾರ ಹುಡುಕುತ್ತಾರೆ: ಕೆ ಹರಿಪ್ರಸಾದ್

ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು: ಜಗದೀಶ್ ಶೆಟ್ಟರೆ ಆಗ್ರಹ

BB Season 12, ಧ್ರುವಂತ್ ಮಾತಿಂದ್ದ ರೊಚ್ಚಿಗೆದ್ದ ಸೂರಜ್, ಧನುಷ್, ಸ್ಪಂದನಾ

ಸಿದ್ದರಾಮಯ್ಯ ಕಾಂಗ್ರೆಸ್ಸಿಗನೂ ಅಲ್ಲ, ಜೆಡಿಎಸ್ ಅಲ್ಲ, ಅಹಿಂದ ನಾಯಕನೂ ಅಲ್ಲ: ಎಚ್ ವಿಶ್ವನಾಥ್

ಮುಂದಿನ ಸುದ್ದಿ
Show comments