Webdunia - Bharat's app for daily news and videos

Install App

ಈ ಬಾರಿ ಚುನಾವಣೆಯಲ್ಲಿ ಕುಟುಂಬ ರಾಜಕಾರಣಕ್ಕೆ ಜನರೂ ತಕ್ಕ ಶಿಕ್ಷೆ ನೀಡಿದ್ದಾರೆ- ಪಶ್ಚಾತ್ತಾಪ ಪಟ್ಟ ದೇವೇಗೌಡರು

Webdunia
ಭಾನುವಾರ, 30 ಜೂನ್ 2019 (06:35 IST)
ಬೆಂಗಳೂರು : ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಸರ್ಕಾರ ಹೀನಾಯವಾಗಿ ಸೋಲನುಭವಿಸಿದ ಹಿನ್ನಲೆಯಲ್ಲಿ ಕುಟುಂಬ ರಾಜಕಾರಣದ ಬಗ್ಗೆ ಪಶ್ಚಾತ್ತಾಪ ಪಟ್ಟಿದ್ದಾರೆ.




ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ನಾನು ಎಂದೂ ಕುಟುಂಬ ರಾಜಕಾರಣ ಮಾಡಿಲ್ಲ. ಆದರೆ ಕಳೆದ ಚುನಾವಣೆಯಲ್ಲಿ ನಮ್ಮ ಕುಟುಂಬದ ಮೂವರು ಚುನಾವಣೆಗೆ ಸ್ಪರ್ಧಿಸಬೇಕಾಯಿತು. ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಆಗಿದ್ದನ್ನು ನೋಡಿದ್ದೇನೆ. ಇದಕ್ಕೆ ಜನರೂ ತಕ್ಕ ಶಿಕ್ಷೆ ನೀಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.


ಅಲ್ಲದೇ ಹಿಂದುಳಿದ ವರ್ಗ, ಅಲ್ಪಸಂಖ್ಯಾತ ವರ್ಗದವರನ್ನು ಗುರುತಿಸಿಕೊಂಡು ಬಂದೆ. ನಾನು ಚುನಾವಣೆಗೆ ನಿಂತಿದ್ದೂ ಆಕಸ್ಮಿಕ. ಇನ್ನು ನಾನು ಚುನಾವಣೆಗೆ ನಿಲ್ಲುವುದಿಲ್ಲ. ಪಕ್ಷ ಸಂಘಟನೆಗೆ ಸಾಕಷ್ಟು ದುಡಿದಿದ್ದೇನೆ. ನನ್ನ ಕಾಲ ಮುಗಿಯುತ್ತಾ ಬಂದಿದೆ. ಕೊನೆ ಉಸಿರಿರುವ ವರೆಗೆ ಪಕ್ಷದ ಏಳಿಗೆಗಾಗಿ ದುಡಿಯುತ್ತೇನೆ. ಇನ್ನು ಮುಂದೆ ಮುಂದಿನ ಪೀಳಿಗೆಯ ಜವಾಬ್ದಾರಿ ಎಂದು ಅವರು ಭಾವುಕರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

ಮುಂದಿನ ಸುದ್ದಿ
Show comments