ಸೊಕ್ಕಿನ ಸಿಎಂ ಸಿದ್ದರಾಮಯ್ಯಗೆ ಜನತೆ ಬಹಿಷ್ಕಾರ ಹಾಕಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕರೆ ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ನಿಮ್ಮ ನಿಮ್ಮ ಗ್ರಾಮಗಳಲ್ಲಿ ಪ್ರವೇಶಿಸಲು ಬಿಡಬೇಡಿ. ಇಂತಹ ಕಾರ್ಯಕ್ರಮ ಮಾಡಿನೋಡಿ ಎಂದು ಮತದಾರರಿಗೆ ಮನವಿ ಮಾಡಿದ್ದಾರೆ.
ತೋಟದಲ್ಲಿ ಹಣ ಹಂಚುತ್ತಿದ್ದೀರಾ? ನಾಚಿಕೆಯಾಗ್ಬೇಕು ನಿಮ್ಮ ಅಡಳಿತವೈಖರಿಗೆ ಎಂದು ಗುಡುಗಿದ್ದಾರೆ. ಹಣಬಲ, ಅಧಿಕಾರದ ಬಲದಿಂದ ಚುನಾವಣೆಯಲ್ಲಿ ಗೆಲ್ಲುತ್ತೇವೆ ಎನ್ನುವುದು ನಿಮ್ಮ ಭ್ರಮೆ. ಕಾಂಗ್ರೆಸ್ ಪಕ್ಷಕ್ಕೆ ಸೋಲು ಕಟ್ಟಿಟ್ಟ ಬುತ್ತಿ ಎಂದು ಗುಡುಗಿದರು.
ರಾಜ್ಯಸರಕಾರ ಅಧಿಕಾರ ದುರುಪಯೋಗಪಡಿಸಿಕೊಂಡು ಅಧಿಕಾರಿಗಳನ್ನು ಹೆದರಿಸಿ ಕಾಂಗ್ರೆಸ್ ಪಕ್ಷದ ಪರವಾಗಿ ಕಾರ್ಯನಿರ್ವಹಿಸುವಂತೆ ಮಾಡಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.