ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದು ರಾಜ್ಯದ ಜನತೆಯ ಆಶೀರ್ವಾದದಿಂದಲ್ಲ. ಇತರ ಪಕ್ಷಗಳ ಬೆಂಬಲದಿಂದ ಸಿಎಂ ಆಗಿದ್ದರು. ನಮ್ಮದು ವಂಶಪಾರಂಪರ್ಯ ರಾಜಕಾರಣವಲ್ಲ ಎಂದು ಜೆಡಿಎಸ್ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಭವಾನಿ ರೇವಣ್ಣ ಸ್ಪರ್ಧೆ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.
ನಮ್ಮ ಕುಟುಂಬದಿಂದ ಕುಮಾರಸ್ವಾಮಿ ಮತ್ತು ರೇವಣ್ಣ ಮಾತ್ರ ಸ್ಪರ್ಧಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಇದರಿಂದ ಉಹಾಪೋಹಗಳಿಗೆ ತೆರೆ ಎಳೆದಂತಾಗಿದೆ.
ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದು ರಾಜ್ಯದ ಜನತೆಯ ಆಶೀರ್ವಾದದಿಂದಲ್ಲ. ಇತರ ಪಕ್ಷಗಳ ಬೆಂಬಲದಿಂದ ಸಿಎಂ ಆಗಿದ್ದಾರೆ. ನಮ್ಮದು ವಂಶಪಾರಂಪರ್ಯ ರಾಜಕಾರಣವಲ್ಲ ಎಂದರು.
ಎಚ್.ಡಿ.ರೇವಣ್ಣ ಅವರನ್ನು ನಾನು ಮಂತ್ರಿಯಾಗಿ ಮಾಡಲಿಲ್ಲ. ಆದರೆ, ಅಂದಿನ ಸಿಎಂ ಆಗಿದ್ದ ಜೆ.ಎಚ್.ಪಟೇಲರು ರೇವಣ್ಣರನ್ನು ಮಂತ್ರಿಯಾಗಿ ಮಾಡಿದರು ಎಂದು ಜೆಡಿಎಸ್ ವರಿಷ್ಠ ದೇವೇಗೌಡರು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.