Select Your Language

Notifications

webdunia
webdunia
webdunia
webdunia

ಮಳೆಗೆ ಜನರ ಜೀವನ ಅಸ್ತವ್ಯಸ್ತ

ಮಳೆಗೆ ಜನರ ಜೀವನ ಅಸ್ತವ್ಯಸ್ತ
bangalore , ಶನಿವಾರ, 15 ಅಕ್ಟೋಬರ್ 2022 (18:42 IST)
ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಕರುನಾಡಿನಲ್ಲಿ ಜನ ಜೀವನ ಅಸ್ತವ್ಯಸ್ತವಾಗಿದೆ.ಅದರಂತೆ ವರುಣನ ಕಡು ಕೋಪಕ್ಕೆ ಮಂಡ್ಯ ಜಿಲ್ಲೆಯ ಜನರು ತತ್ತರಿಸಿ ಹೋಗಿದ್ದಾರೆ. ತಡ ರಾತ್ರಿ ಸುರಿದ ಭಾರೀ ಮಳೆಗೆ ಜನರ ಜೀವನ ಅಸ್ತವ್ಯಸ್ತವಾಗಿದೆ. ಬೆಂಗಳೂರು - ಮೈಸೂರು ಹೆದ್ದಾರಿಯಲ್ಲಿ ಎರಡು ಕಿಲೋ ಮೀಟರ್‌ವರೆಗೂ ರಸ್ತೆಯಲ್ಲೇ ನೀರು ನಿಂತಿದೆ. ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಂಚಾರ ನಡೆಸುತ್ತಿದ್ದಾರೆ. ರಾಷ್ಟ್ರೀಯ ದಶಪಥ ಅವೈಜ್ಞಾನಿಕ ಹೆದ್ದಾರಿ ನಿರ್ಮಾಣವೇ ಈ ಅವಘಡಕ್ಕೆ ಕಾರಣವೆಂದು ಆರೋಪ ಮಾಡಲಾಗಿದ್ದು, ಮಂಡ್ಯ ಜನರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಾಹನ ಸವಾರರು ಮಂಡ್ಯದ ಇಂಡವಾಳು ಬಳಿ ನಿಂತಿರುವ ನೀರಿನಿಂದ ರೋಸಿ ಹೋಗಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಡವಿಟ್ಟ ಕಾರ್​​ಗಳ ಮಾರಾಟ!