Webdunia - Bharat's app for daily news and videos

Install App

ಘಟಪ್ರಭೆ ಭೋರ್ಗರೆತಕ್ಕೆ ಜನಜೀವನ ತತ್ತರ

Webdunia
ಶನಿವಾರ, 7 ಸೆಪ್ಟಂಬರ್ 2019 (18:45 IST)
ಮಹಾರಾಷ್ಟ್ರದಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಗಡಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಮತ್ತೆ ಮುಂದುವರಿದಿದೆ.

ಬೆಳಗಾವಿ ಜಿಲ್ಲೆಯಾದ್ಯಾಂತ ಪ್ರವಾಹದ ಭೀತಿ ಎದುರಾಗಿದೆ. ಘಟಪ್ರಭೆ ನದಿಯ ನೀರಿನ ಮಟ್ಟ ಹೆಚ್ಚಾಗಿದ್ದು  ಗೋಕಾಕ ಜಲಪಾತವು ರಭಸದಿಂದ ಧುಮ್ಮಿಕ್ಕುತ್ತಿದೆ.

ಕಳೆದ ಎರಡು ದಿನಗಳಿಂದ ಬೆಳಗಾವಿ ಜಿಲ್ಲೆ ಮತ್ತು ಮಹರಾಷ್ಟ್ರ ರಾಜ್ಯದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿರುವುದರ ಪರಿಣಾಮದಿಂದ ಜಿಲ್ಲೆಯ ಎಲ್ಲ ನದಿಗಳು ತುಂಬಿವೆ. ಮತ್ತೆ ಪ್ರವಾಹದ ಭೀತಿಯಲ್ಲಿದ್ದು ನದಿ ತಟದ ಗ್ರಾಮದ ಜನರು ಕೈಯಲ್ಲಿ ಜೀವ ಹಿಡಿದುಕೊಂಡು ಕುಳಿತುಕೊಳ್ಳುವಂತ ಪರಿಸ್ಥಿತಿ ನಿರ್ಮಾಣವಾಗಿದೆ.

ಹಿಡಕಲ್ ಜಲಾಶಯದಿಂದ ಘಟಪ್ರಬಾ ನದಿಗೆ ನೀರು ಬಿಡುಗಡೆ ಮಾಡಲಾಗಿದೆ. ಘಟಪ್ರಭ ನದಿ ಪ್ರವಾಹ ಮಟ್ಟ ಮೀರಿ ಹರಿಯುತ್ತಿದೆ. ನೀರಿನ ಮಟ್ಟ ಹೆಚ್ಚಿರುವುದರಿಂದ ಗೋಕಾಕ ಜಲಪಾತ ರಭಸದಿಂದ ಧುಮ್ಮಕ್ಕುತ್ತಿದ್ದು ಪ್ರವಾಸಿಗರಿಗೆ  ಮನರಂಜನೆಯ ರಸದೌತನ ನೀಡುತ್ತಿದೆ. ಆದರೆ ಮತ್ತೊಂದೆಡೆ ಈಗಾಗಲೇ ಪ್ರವಾಹದ ಭೀತಿ ಎದುರಿಸಿ ಸುಧಾರಿಸಿಕೊಳ್ಳುತ್ತಿದ್ದ ಗೋಕಾಕ ತಾಲೂಕಿನ ಜನತೆಗೆ ಮತ್ತೆ ಭಯದ ವಾತಾವರಣ ಸೃಷ್ಟಿ ಮಾಡಿದೆ.  

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments