Select Your Language

Notifications

webdunia
webdunia
webdunia
webdunia

ಸರ್ಕಾರವನ್ನು ಜನರು ಹುಡುಕಬಾರದು, ಜನರ ಬಳಿಯೇ ಸರ್ಕಾರ ಹೋಗಬೇಕು

DK Shikumar
ಬೆಳಗಾವಿ: ಜನರು ಸರ್ಕಾರ ಹುಡುಕಬಾರದು, ಜನರ ಬಳಿಯೇ ಸರ್ಕಾರ ಹೋಗಬೇಕು. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿಗಳು ಸೇರಿ ಎಲ್ಲ ಇಲಾಖೆ ಅಧಕಾರಿಗಳು ಕೆಲಸ ಆಡಬೇಕೆಂದು ಸಿಎಂ ಡಿಕೆ ಶಿವಕುಮಾರ್ ಸೂಚನೆ ನೀಡಿದರು. 

ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಗುರುವಾರ ನಡೆದ ಬೆಳಗಾವಿ ವಿಭಾಗಮಟ್ಟದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಎಲ್ಲ ಇಲಾಖೆಗಳ ಜಿಲ್ಲಾ ಮತ್ತು ತಾಲ್ಲೂಕು ಹಂತದ ಪ್ರತಿ ಅಧಿಕಾರಿ ಕೇಂದ್ರಸ್ಥಾನದಲ್ಲಿ ಇರುವ ಬಗ್ಗೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಸಿಇಒಗಳು ಖಚಿತಪಡಿಸಿಕೊಳ್ಳಬೇಕು. ಅವರ ಚಲನ-ವಲನದ ಮೇಲೆ ನಿರಂತರ ನಿಗಾ ವಹಿಸಬೇಕೆಂದು ಹೇಳಿದರು.

ಸರ್ಕಾರವನ್ನು ಜನರು ಹುಡುಕಬಾರದು. ಜನರ ಬಳಿಯೇ ಸರ್ಕಾರ ಹೋಗಬೇಕು ಎಂಬುದಕ್ಕೆ ನಮ್ಮ ಮೊದಲ ಆದ್ಯತೆ' ಎಂದರು.

'ಜನರನ್ನು ಕಚೇರಿಗೆ ಅಲೆದಾಡಿಸುವುದು ನಿಲ್ಲಬೇಕು. ಅಧಿಕಾರಿಗಳು ಘನತೆಯಿಂದ ಇರಬೇಕು' ಎಂದರು‌.

Share this Story:

Follow Webdunia kannada

ಮುಂದಿನ ಸುದ್ದಿ

ಫುಟ್ ಪಾತ್ ತೆರವು ಕಾರ್ಯಚರಣೆ, ಬೀದಿಬದಿ ವ್ಯಾಪಾರಿಗಳಿಗೆ ಮತ್ತೇ ಶಾಕ್ ಕೊಟ್ಟ ಕೃಷ್ಣ ಬೈರೇಗೌಡ