Select Your Language

Notifications

webdunia
webdunia
webdunia
webdunia

ಸಿದ್ದಗಂಗಾ ಶ್ರೀಗಳ ಆರೋಗ್ಯದ ಬಗ್ಗೆ ಜನರಿಗೆ ಆತಂಕ ಬೇಡ- ಸಿಎಂ ಹೆಚ್.ಡಿ. ಕುಮಾರಸ್ವಾಮಿ

ಸಿದ್ದಗಂಗಾ ಶ್ರೀಗಳ ಆರೋಗ್ಯದ ಬಗ್ಗೆ ಜನರಿಗೆ ಆತಂಕ ಬೇಡ- ಸಿಎಂ ಹೆಚ್.ಡಿ. ಕುಮಾರಸ್ವಾಮಿ
ಚಿಕ್ಕಮಗಳೂರು , ಶುಕ್ರವಾರ, 7 ಡಿಸೆಂಬರ್ 2018 (11:16 IST)
ಚಿಕ್ಕಮಗಳೂರು : ಸಿದ್ದಗಂಗಾ ಶ್ರೀಗಳ ಆರೋಗ್ಯದ ಬಗ್ಗೆ ಜನರಿಗೆ ಆತಂಕ ಬೇಡ ಎಂದು ರಾಜ್ಯದ ಜನತೆಗೆ ಸಿಎಂ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.


ಚಿಕ್ಕಮಗಳೂರಿನ ಶೃಂಗೇರಿ ಶಾರದಾಂಬೆಯ ಸನ್ನಿಧಿಗೆ ಭೇಟಿ ನೀಡಿ ದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಮಠದ ಕಿರಿಯ ಸ್ವಾಮೀಜಿ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ಹೆಚ್ಚಿನ ಚಿಕಿತ್ಸೆಗೆ ಚೆನ್ನೈ ಆಸ್ಪತ್ರೆಗೆ ಕರೆದುಕೊಂಡು ಹೋಗಲು ತೀರ್ಮಾನ ಮಾಡಲಾಗಿದೆ ಎಂದು ಹೇಳಿದ್ದಾರೆ.


ಸಿದ್ದಗಂಗಾ ಶ್ರೀಗಳಿಗೆ ಹಲವಾರು ವೈದ್ಯರು ಹಾಗೂ ತಜ್ಞರ ತಂಡದಿಂದ ಚಿಕಿತ್ಸೆ ನೀಡಲಾಗುತ್ತಿದೆ. ಸರ್ಕಾರ ಆಸ್ಪತ್ರೆಯ ವೆಚ್ಚವನ್ನು ಭರಿಸಲಿದೆ. ರಾಜ್ಯದ ಮುಖ್ಯ ಕಾರ್ಯದರ್ಶಿ ಹಾಗೂ ಪೊಲೀಸರಿಗೆ ಎಲ್ಲಾ ರೀತಿಯ ಸಹಕಾರಕ್ಕೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದಗಂಗಾ ಶ್ರೀಗಳನ್ನು ಚೆನ್ನೈಗೆ ತೆರಳುತ್ತಿರುವ ಹಿನ್ನಲೆ; ಮಠಕ್ಕೆ ಭೇಟಿ ನೀಡಿ ಶ್ರೀಗಳ ಆರೋಗ್ಯ ವಿಚಾರಿಸಿದ ಬಿಎಸ್ ವೈ