Webdunia - Bharat's app for daily news and videos

Install App

ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಬರುವ ಆನೆಗೆ ಕಲ್ಲೆಸೆತ: ನೆಟ್ಟಿಗರ ಆಕ್ರೋಶ

Krishnaveni K
ಶುಕ್ರವಾರ, 12 ಜನವರಿ 2024 (10:20 IST)
Photo Courtesy: Twitter
ಗುಂಡ್ಲುಪೇಟೆ: ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಪ್ರತಿನಿತ್ಯ ಬಂದು ದೇವರ ಪ್ರಸಾದ ಸ್ವೀಕರಿಸುವ ಆನೆ ಬಗ್ಗೆ ಕಳೆದ ಕೆಲವು ದಿನಗಳಿಂದ ಕೇಳಿರುತ್ತೀರಿ.

ಕೆಲವು ಸಮಯದಿಂದ ಈ ಆನೆ ಪ್ರತಿನಿತ್ಯ ದೇವಾಲಯ ಪರಿಸರಕ್ಕೆ ಬಂದು ದೇವಸ್ಥಾನಕ್ಕೆ ಸುತ್ತು ಹಾಕುವುದಲ್ಲದೆ, ಬಾಗಿಲ ಬಳಿ ಬಂದು ದೇವರಿಗೆ ನಮಸ್ಕರಿಸಿ ಪ್ರಸಾದ ಸ್ವೀಕರಿಸಿ ತೆರಳುತ್ತದೆ.

ಈ ಆನೆಯ ಫೋಟೋ, ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಎಂದಿನಂತೇ ಆನೆ ದೇವಾಲಯದ ಪ್ರಾಂಗಣದಲ್ಲಿ ಓಡಾಡಿಕೊಂಡಿರುವಾಗ ಕೆಲವರು ಅದಕ್ಕೆ ಕಲ್ಲು ಎಸೆದು ಓಡಿಸುವ ದೃಶ್ಯವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

ಇದಕ್ಕೆ ನೆಟ್ಟಿಗರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಯಾರಿಗೂ ಏನೂ ಮಾಡದೇ ತನ್ನ ಪಾಡಿಗೆ ತಾನು ಬಂದು ದೇವರ ಪ್ರಸಾದ ಸ್ವೀಕರಿಸಿ ಹೋಗುವ ಆನೆಗೆ ಕಲ್ಲು ಎಸೆದು ಯಾಕೆ ತೊಂದರೆ ಕೊಡುತ್ತೀರಿ? ಅಧಿಕಾರಿಗಳು ಯಾಕೆ ಇದನ್ನು ಗಮನಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments