ರಣಗಾಳಿಗೆ ಮಲೆನಾಡಿಗರು ಕಂಗಾಲು…!

Webdunia
ಬುಧವಾರ, 22 ಆಗಸ್ಟ್ 2018 (19:46 IST)
ಕಾಫಿನಾಡಿನ ಮಲೆನಾಡು ಭಾಗದಲ್ಲಿ ಸುರಿಯುತ್ತಿರೋ ಸೋನೆ ಮಳೆ ಹಾಗೂ ರಣಗಾಳಿಗೆ ಅಲ್ಲಲ್ಲೆ ಬೆಟ್ಟ-ಗುಡ್ಡ ಹಾಗೂ ಭೂಮಿ ಕುಸಿಯುತ್ತಿವೆ. ಮಲೆನಾಡಿಗರು ಆತಂಕಕ್ಕೀಡಾಗಿದ್ದಾರೆ. ಎರಡ್ಮೂರು ದಿನದಿಂದ ಮಲೆನಾಡಿನಲ್ಲಿ ಮಳೆಯ ಪ್ರಮಾಣ ತಗ್ಗಿದ್ದು ಗಾಳಿಯ ವೇಗ ಹೆಚ್ಚಾಗಿದೆ.

ಎರಡು ತಿಂಗಳ ಕಾಲ ಸುರಿದ ಮಳೆಗೆ ಭೂಮಿಯ ತೇವಾಂಶ ಹೆಚ್ಚಾಗಿದ್ದು ಈಗಿನ ದೈತ್ಯ ಗಾಳಿಯಿಂದ ಭೂಕುಸಿತದ ಪ್ರಕರಣ ಹೆಚ್ಚಾಗಿವೆ. ಎನ್.ಆರ್.ಪುರ ತಾಲೂಕಿನ ಖಾಂಡ್ಯ ಹೋಬಳಿಯ ಬಿದರು, ಮೇಲ್‌ ಪಲ್‌ ಗ್ರಾಮದಲ್ಲಿ ಹಳಸೆ ಶಿವಣ್ಣ , ಸತೀಶ್ ಭಟ್ ಎಂಬುವರಿಗೆ ಸೇರಿದ ಕಾಫಿ ತೋಟದಲ್ಲಿ ಸುಮಾರು ಒಂದು ಎಕರೆಯಷ್ಟು  ಭೂಮಿ ಕುಸಿತವಾಗಿದೆ. ಕುಸಿದಿರೋ ಮಣ್ಣು ತೋಟದ ಇತರೇ ಭಾಗದ ಮೇಲೆ ಅಪ್ಪಳಿಸಿರೋದ್ರಿಂದ ಒಂದೂವರೆ-ಎರಡು ಎಕರೆಯಲ್ಲಿನ ಕಾಫಿ, ಅಡಿಕೆ, ಮೆಣಸು ಬೆಳೆ ಸಂಪೂರ್ಣ ನಾಶವಾಗಿದೆ. ಭೂಮಿ ಹಸಿ ಇರೋ ಕಾರಣ ಮಣ್ಣು ಕುಸಿಯುತ್ತಲೇ ಇದ್ದು, ರೈತರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಆತಂಕಕ್ಕೀಡಾಗಿದ್ದಾರೆ.  ಚಿಕ್ಕಮಗಳೂರು ತಾಲೂಕಿನ ಗಡಿಗ್ರಾಮವಾದ ಸಿದ್ದಾಪುರ ಗ್ರಾಮದಲ್ಲೂ ಸುಮಾರು ಒಂದು ಎಕರೆಯಷ್ಟು ಭೂಮಿ ಕುಸಿದಿದ್ದು, ಅಲ್ಲೂ ಸಹಾ ಅಡಿಕೆ, ಕಾಫಿ ಸಂಪೂರ್ಣ ನಾಶವಾಗಿತ್ತು. ಅಷ್ಟೆ ಅಲ್ಲದೆ ಬೊಗಸೆ ದೊಡ್ಡಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಭೂ ಕುಸಿತವಾಗಿದೆ.

ಮಲೆನಾಡಿನಾದ್ಯಂತ ಕೆಲವೆಡೆ ರಸ್ತೆ ಕುಸಿಯುತ್ತಿದ್ದು, ಹಲವು ಗ್ರಾಮಗಳಿಗೆ ದಾರಿ ಇಲ್ಲದಂತಾಗಿದೆ. ಬೆಟ್ಟ-ಗುಡ್ಡಗಳ ಮಣ್ಣು ಭೂಮಿಗೆ ಕುಸಿಯುತ್ತಿದ್ದು, ಸಂಚಾರ ಕೂಡ ಅಸ್ತವ್ಯಸ್ತವಾಗ್ತಿದೆ.  ಮಳೆ ಹಾಗೂ ರಣಗಾಳಿಯಿಂದ ಮಲೆನಾಡಿಗರು ಬೆಚ್ಚಿಬಿದ್ದಿದ್ದಾರೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ

ಬೆಂಗಳೂರು ಕ್ವಾರಿ ದುರಂತದಲ್ಲಿ ಗಾಯಗೊಂಡವರನ್ನು ಭೇಟಿ ಮಾಡಿ ಗಂಭೀರ ಆರೋಪ ಮಾಡಿದ ಆರ್ ಅಶೋಕ್

ಕೇತನ್ ಅಗರ್ವಾಲ್ ಕೇಸ್ ಬೆನ್ನಲ್ಲೇ ರಾಜ ರಘುವಂಶಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಇಷ್ಟೆಲ್ಲಾ ಮಾಡಿದ್ರೂ ಕೇತನ್ ಅಗರ್ವಾಲ್ ಹತ್ಯೆ ಮಾಡಿದ್ದಕ್ಕೆ ಸಿಯಾ ಗೋಯಲ್ ಗೆ ಶಿಕ್ಷೆಯಾಗೋದು ಅಷ್ಟು ಸುಲಭವಲ್ಲ

ದಬ್ಬಾಳಿಕೆ ಮಾಡುವುದನ್ನು ಬಿಟ್ಟು ರೈತರ ಜೊತೆ ಸಮಾಲೋಚನೆ ಮಾಡಿ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments