Webdunia - Bharat's app for daily news and videos

Install App

ಸಿಎಂ ಆಪ್ತ ಶಾಸಕರಿದ್ದರೂ ಪ್ರಯೋಜನವಿಲ್ಲ ಎನ್ನುತ್ತಿರುವ ಜನರು!

Webdunia
ಗುರುವಾರ, 17 ಜನವರಿ 2019 (19:49 IST)
ಸಕ್ಕರೆ ನಾಡು ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಮಂಚನಹಳ್ಳಿ ಗ್ರಾಮದಲ್ಲಿ ನಿರಂತರವಾಗಿ ಕಾಡಾನೆಗಳು ರಾತ್ರಿ ವೇಳೆಯಲ್ಲಿ ಕಾಡಿನಿಂದ ಆಹಾರಕ್ಕಾಗಿ  ನಾಡಿಗೆ ಬಂದು ರೈತರು ಕಷ್ಟ ಪಟ್ಟು ಬೆಳೆದ ಬೆಳೆಯನ್ನು ಕ್ಷಣಾರ್ಧದಲ್ಲಿ ನಾಶ ಪಡಿಸುತ್ತಿವೆ.
ಮಳವಳ್ಳಿ ತಾಲ್ಲೂಕಿನಲ್ಲಿರುವ ಶಿಂಷಾ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಹೆಬ್ಬಣಿ, ಮಂಚನಹಳ್ಳಿ, ನೆಟ್ಕಲ್ , ಶಿಂಷಾ ಸೇರಿದಂತೆ ಅನೇಕ  ಗ್ರಾಮಗಳಿಗೆ ರಾತ್ರಿ ವೇಳೆಯಲ್ಲಿ ಕಾಡಾನೆಗಳ ಅಟ್ಟಹಾಸ ಹೆಚ್ಚಾಗುತ್ತಿದೆ. ಇಲ್ಲಿ ಸಂಜೆ ಆರು ಗಂಟೆಯಾದ ಮೇಲೆ  ಯಾರೂ ತಿರುಗಾಡುವುದಿಲ್ಲ. ಇದಕ್ಕೆ ಕಾರಣ ಕಾಡಾನೆಗಳ ಭಯ.

ರೈತರ ಸರ್ಕಾರ ಎಂದು ಹೇಳಿಕೊಳ್ಳುವ  ಸಮ್ಮಿಶ್ರ ಸರ್ಕಾರದ ಅದರಲ್ಲೂ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಅಪ್ತರೇ ಈ ಕ್ಷೇತ್ರದ ಶಾಸಕರಾಗಿದ್ದಾರೆ. ಇಷ್ಟಿದ್ದರೂ ಇದುವರೆಗೂ ಕಾಡಾನೆಗಳ ಹಾವಳಿ ನಿಯಂತ್ರಣಕ್ಕೆ  ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.  ಕೂಡಲೇ ಅರಣ್ಯ ಇಲಾಖೆಯ ಸಿಬ್ಬಂದಿಗಳು ಈ ಭಾಗದಲ್ಲಿ ರಾತ್ರಿ ಗಸ್ತು ಹೆಚ್ಚಿಸಬೇಕು. ಆನೆಗಳ ಹಾವಳಿ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕೆಂದು ಜನರು ಒತ್ತಾಯಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mock Drill: ಬೆಂಗಳೂರು ಪೂರ್ತಿ ಲೈಟ್ಸ್ ಆಫ್

Operation Sindoor: ಸೇನೆಗೆ ಭಗವಂತ ಶಕ್ತಿ ತುಂಬಲು ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ

Operation Sindoor: ಮತ್ತೆ ಬಾಲ ಬಿಚ್ಚಿದ ಪಾಪಿಸ್ತಾನ: ಪ್ರತಿದಾಳಿಗೆ ಸೇನೆಗೆ ಪರಮಾಧಿಕಾರ ನೀಡಿದ ಪಾಕ್‌ ಪ್ರಧಾನಿ

Operation Sindoor: 18 ವಿಮಾನಗಳು ಬಂದ್, 200 ವಿಮಾನಗಳು ರದ್ದು: ವಿಮಾನ ಪ್ರಯಾಣಿಕರು ಈ ಸೂಚನೆ ಗಮನಿಸಿ

ಸಿಂಧೂರರಾಮಯ್ಯನಾದ ಸಿದ್ದರಾಮಯ್ಯ: ಸಿಎಂ ವರಸೆ ಬಗ್ಗೆ ಪ್ರತಾಪ ಸಿಂಹ ಟೀಕೆ

ಮುಂದಿನ ಸುದ್ದಿ
Show comments