Webdunia - Bharat's app for daily news and videos

Install App

ಜನರು ಮತ್ತೆ ಬಿಜೆಪಿ ಮೇಲೆ ನಂಬಿಕೆಯಿಡುತ್ತಾರೆ: ಪ್ರಧಾನಿ ಮೋದಿ ವಿಶ್ವಾಸ

Sampriya
ಗುರುವಾರ, 4 ಏಪ್ರಿಲ್ 2024 (12:26 IST)
ನವದೆಹಲಿ: ಇಂದು ಸಂಜೆ 3.30ಕ್ಕೆ ಪಶ್ಚಿಮ ಬಂಗಾಳದ ಕೂಚ್ ಬೆಹಾರ್‌ದಲ್ಲಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿರುವ ಪ್ರಧಾನಿ ಮೋದಿ ಅವರು, ಅದಕ್ಕೂ ಮುನ್ನಾ ಎಕ್ಸ್‌ ಖಾತೆಯಲ್ಲಿ ಕ್ಷೇತ್ರದ ಜನರು ಮತ್ತೊಮ್ಮೆ ಭಾರತೀಯ ಜನತಾ ಪಕ್ಷದ ಮೇಲೆ ನಂಬಿಕೆ ಇಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇಂದು ಸಂಜೆ ನಡೆಯುವ  ಪಶ್ಚಿಮ ಬಂಗಾಳದ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲು ಕೂಚ್ ಬೆಹರ್‌ನ ಜನರ ನಡುವೆ ಇರಲು ನಾನು ಎದುರು ನೋಡುತ್ತಿದ್ದೇನೆ. ಅಲ್ಲಿನ ಜನರು ನಮ್ಮ ಅಭಿವೃದ್ಧಿ ಕಾರ್ಯಸೂಚಿಯನ್ನು ಹೆಚ್ಚು ಬೆಂಬಲಿಸಿದ್ದಾರೆ ಮತ್ತು ಅವರು ಮತ್ತೊಮ್ಮೆ ತಮ್ಮ ನಂಬಿಕೆಯನ್ನು ಇರಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಬರೆದುಕೊಂಡಿದ್ದಾರೆ.

ಕೂಚ್ ಬಿಹಾರ್ ನಿಂದ ಹಾಲಿ ಸಂಸದ ಮತ್ತು ಬಿಜೆಪಿ ನಾಯಕ ನಿಸಿತ್ ಪ್ರಮಾಣಿಕ್ ಅವರನ್ನು ಲೋಕಸಭೆ ಚುನಾವಣೆಗೆ ಬಿಜೆಪಿ ನಿಲ್ಲಿಸಿದೆ.

ಉತ್ತರ ಬಂಗಾಳದಲ್ಲಿರುವ ಕೂಚ್ ಬೆಹಾರ್ ಮತ್ತು ರಾಜ್ಯದ ಅಲಿಪುರ್ದೂರ್ ಮತ್ತು ಜಲಪೈಗುರಿ ಮೂರು ಕ್ಷೇತ್ರಗಳು ಏಪ್ರಿಲ್ 19 ರಂದು ಲೋಕಸಭೆ ಚುನಾವಣೆಯ ಏಳು ಹಂತಗಳಲ್ಲಿ ಮೊದಲ ಬಾರಿಗೆ ಮತದಾನ ನಡೆಯಲಿದೆ.


<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments