Daily Horoscope

ಜನರು ಮತ್ತೆ ಬಿಜೆಪಿ ಮೇಲೆ ನಂಬಿಕೆಯಿಡುತ್ತಾರೆ: ಪ್ರಧಾನಿ ಮೋದಿ ವಿಶ್ವಾಸ

Sampriya
ಗುರುವಾರ, 4 ಏಪ್ರಿಲ್ 2024 (12:26 IST)
ನವದೆಹಲಿ: ಇಂದು ಸಂಜೆ 3.30ಕ್ಕೆ ಪಶ್ಚಿಮ ಬಂಗಾಳದ ಕೂಚ್ ಬೆಹಾರ್‌ದಲ್ಲಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿರುವ ಪ್ರಧಾನಿ ಮೋದಿ ಅವರು, ಅದಕ್ಕೂ ಮುನ್ನಾ ಎಕ್ಸ್‌ ಖಾತೆಯಲ್ಲಿ ಕ್ಷೇತ್ರದ ಜನರು ಮತ್ತೊಮ್ಮೆ ಭಾರತೀಯ ಜನತಾ ಪಕ್ಷದ ಮೇಲೆ ನಂಬಿಕೆ ಇಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇಂದು ಸಂಜೆ ನಡೆಯುವ  ಪಶ್ಚಿಮ ಬಂಗಾಳದ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲು ಕೂಚ್ ಬೆಹರ್‌ನ ಜನರ ನಡುವೆ ಇರಲು ನಾನು ಎದುರು ನೋಡುತ್ತಿದ್ದೇನೆ. ಅಲ್ಲಿನ ಜನರು ನಮ್ಮ ಅಭಿವೃದ್ಧಿ ಕಾರ್ಯಸೂಚಿಯನ್ನು ಹೆಚ್ಚು ಬೆಂಬಲಿಸಿದ್ದಾರೆ ಮತ್ತು ಅವರು ಮತ್ತೊಮ್ಮೆ ತಮ್ಮ ನಂಬಿಕೆಯನ್ನು ಇರಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಬರೆದುಕೊಂಡಿದ್ದಾರೆ.

ಕೂಚ್ ಬಿಹಾರ್ ನಿಂದ ಹಾಲಿ ಸಂಸದ ಮತ್ತು ಬಿಜೆಪಿ ನಾಯಕ ನಿಸಿತ್ ಪ್ರಮಾಣಿಕ್ ಅವರನ್ನು ಲೋಕಸಭೆ ಚುನಾವಣೆಗೆ ಬಿಜೆಪಿ ನಿಲ್ಲಿಸಿದೆ.

ಉತ್ತರ ಬಂಗಾಳದಲ್ಲಿರುವ ಕೂಚ್ ಬೆಹಾರ್ ಮತ್ತು ರಾಜ್ಯದ ಅಲಿಪುರ್ದೂರ್ ಮತ್ತು ಜಲಪೈಗುರಿ ಮೂರು ಕ್ಷೇತ್ರಗಳು ಏಪ್ರಿಲ್ 19 ರಂದು ಲೋಕಸಭೆ ಚುನಾವಣೆಯ ಏಳು ಹಂತಗಳಲ್ಲಿ ಮೊದಲ ಬಾರಿಗೆ ಮತದಾನ ನಡೆಯಲಿದೆ.


<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments