Webdunia - Bharat's app for daily news and videos

Install App

ಡಿಸೆಂಬರ್ 15ರ ನಂತರ ಹೊಸ ಶಾಲೆಗಳ ಪ್ರಾರಂಭಕ್ಕೆ ಅನುಮತಿ

Webdunia
ಶುಕ್ರವಾರ, 2 ಡಿಸೆಂಬರ್ 2016 (10:04 IST)
2015ರ ಎಸ್.ಎಸ್.ಎಲ್.ಸಿ ಫಲಿತಾಂಶಕ್ಕೆ ಕೊಡುಗೆ ನೀಡಿದ ಸುಮಾರು 60 ಸಾವಿರ ಶಿಕ್ಷಕರಿಗೆ ಪ್ರಶಂಶನಾ ಪತ್ರ ನೀಡಿ ಗೌರವಿಸಲಾಗಿದೆ. ಸರ್ಕಾರ ಶಿಕ್ಷಕರಿಗೆ ಸೇವಾ ಭದ್ರತೆ ನೀಡಲು ಬದ್ಧವಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಸಚಿವ ತನ್ವಿರ ಶೇಠ ಅವರು ಹೇಳಿದರು.
 
ಅವರು ಇಂದು ವಿಧಾನ ಪರಿಷತ್ತಿನಲ್ಲಿ ಶಾಸಕ ಪುಟ್ಟಣ್ಣ ಅವರು ಸೇಕ್ಷನ್ 72ರ ಅಡಿಯಲ್ಲಿ ಮಂಡಿಸಿದ ಗಮನ ಸೇಳೆಯು ಸೂಚನೆಗೆ ಉತ್ತರಿಸಿದರು. ರಾಜ್ಯದಲ್ಲಿ ಕನ್ನಡ ಮಾಧ್ಯಮ ಶಾಲೆಗಳಿಗೆ ಹೆಚ್ಚಿ ಪ್ರೋತ್ಸಾಹ ನೀಡಲಾಗುತ್ತಿದೆ. ಡೈಸ್ ಸಂಸ್ಥೆಯ ಕಳೆದ 16 ವರ್ಷಗಳಿಂದ ತನ್ನ ವರದಿಯನ್ನು ಇಲಾಖೆಗೆ ಸಲ್ಲಿಸುತ್ತಿದ್ದು, ಈ ವರ್ಷದಿಂದ ಜಾರಿಗೊಳಿಸಲಾಗುತ್ತಿದೆ. 
 
ರಾಜ್ಯದ 2164 ಶಾಲೆಗಳಲ್ಲಿ, 10ಕ್ಕಿಂತ ಕಡಿಮೆ ವಿದ್ಯಾರ್ಥಿಗಳಿದ್ದಾರೆ. 277 ಶಾಲೆಗಳಲ್ಲಿ ಪ್ರತಿ ಶಾಲೆಗೆ ಓರ್ವ ವಿದ್ಯಾರ್ಥಿಯಿದ್ದಾನೆ. ಸರ್ಕಾರ ಎಲ್ಲಾ ಮಕ್ಕಳಿಗೂ ಶಿಕ್ಷಣ ದೊರಕಬೇಕು ಎಂಬ ನೀತಿಯಿಂದಾಗಿ ಪ್ರೋತ್ಸಾಹ ನೀಡುತ್ತಿದೆ.
 
ರಾಜ್ಯದಲ್ಲಿ 34 ಶೈಕ್ಷಣಿಕ ಜಿಲ್ಲೆಗಳು, 234 ಶೈಕ್ಷಣಿಕ ತಾಲೂಕುಗಳು ಮತ್ತು 3600 ಕ್ಲಸ್ಟರ್‍ಗಳಿವೆ. ಈಗ ನೇಮಿಸಿರುವ ಬಿಆರ್‍ಸಿ ಮತ್ತು ಎಆರ್‍ಸಿಗಳು ಅಧಿಕಾರಿಗಳಂತೆ ವರ್ತಿಸುತ್ತಿದ್ದು, ಆದರೆ ಅವರು ಅಧಿಕಾರಿಗಳಲ್ಲ, ಅವರನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಸಂಪನ್ಮೂಲ ವ್ಯಕ್ತಿಗಳನ್ನಾಗಿ ನೇಮಿಸಲಾಗಿದೆ.
 
ಗಡಿನಾಡ ಶಾಲೆಗಳ ಅಭಿವೃದ್ಧಿಗಾಗಿ ಸರ್ಕಾರ ನೇಮಿಸಿದ್ದ, ಬರಗೂರ ರಾಮಚಂದ್ರಪ್ಪ ಅವರ ಸಮಿತಿ ವರದಿಯನ್ನು ಪರಿಶೀಲಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದು ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಸಚಿವರು ತಿಳಿಸಿದರು.
 
ಬರುವ ಡಿಸೆಂಬರ್ 15ರ ನಂತರ ಹೊಸ ಶಾಲೆಗಳ ಪ್ರಾರಂಭಕ್ಕೆ ಅನುಮತಿ ಕೊಡಲಾಗುವುದು. ಮತ್ತು ಈಗಿರುವ ಶಾಲೆಗಳ ಉನ್ನತಿಕರಣಕ್ಕೆ ಆದ್ಯತೆ ನೀಡಲಾಗುವುದು. ಶಿಕ್ಷಣ ಕಿರಣ ಕಾರ್ಯಕ್ರಮದ ಮೂಲಕ ಪ್ರತಿ ವಿದ್ಯಾರ್ಥಿಯ 1 ರಿಂದ 10 ನೇ ತರಗತಿಯವರಗಿನ ಶೈಕ್ಷಣಿಕ ದಾಖಲೆಗಳನ್ನು ವ್ಯವಸ್ಥಿತ ರೀತಿಯಲ್ಲಿ ದಾಖಲಿಸಲಾಗಿದೆ. ಶಾಲೆಗಳ ಅನುದಾನ ಹಿಂಪಡೆಯುವ ಸಂದರ್ಭದಲ್ಲಿ ಅದಕ್ಕಾಗಿ ಪೂರಕ ವ್ಯವಸ್ಥೆ ಮಾಡಲಾಗುತ್ತದೆ ಎಂದು ಸಚಿವರು ಸದನಕ್ಕೆ ತಿಳಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments