Webdunia - Bharat's app for daily news and videos

Install App

ಪ್ರವಾಹದಲ್ಲಿ ಕೊಚ್ಚಿಹೋದ ವ್ಯಕ್ತಿ ದಿಢೀರ್ ಪ್ರತ್ಯಕ್ಷ ಕುಟುಂಬಸ್ಥರು , ಜಿಲ್ಲಾಡಳಿತ ಶಾಕ್ ...!!!

Webdunia
ಮಂಗಳವಾರ, 26 ಜುಲೈ 2022 (19:30 IST)
ಪ್ರವಾಹದ ನೀರಲ್ಲಿ ಕೊಚ್ಚಿಕೊಂಡು ಹೋಗಿದ್ದ ವ್ಯಕ್ತಿಗಾಗಿ ಹುಡುಕಾಟ ನಡೆಸಿದರೂ ಸಿಕ್ಕಿರಲಿಲ್ಲ. ಮೃತಪಟ್ಟಿದ್ದಾನೆಂದು ಆತನ ಕುಟುಂಬಕ್ಕೆ ಪರಿಹಾರ ಕೊಡಲೆಂದು ಚೆಕ್ ಕೂಡ ರೆಡಿಯಾಗಿತ್ತು… ಅಷ್ಟರಲ್ಲಿ ಆಗಿದ್ದೇ ಬೇರೆ.
 
ಚಿಕ್ಕಮಗಳೂರಲ್ಲಿ ಸಂಭವಿಸಿದೆ. ಜು.12ರಂದು ಉಂಡೇ ದಾಸರಹಳ್ಳಿ ರಾಜಕಾಲುವೆಯಲ್ಲಿ ಚಿಂದಿ ಆಯುತ್ತಾ ಹಳ್ಳ ದಾಟುವ ವೇಳೆ ಪತ್ನಿ ಗೀತಾಳ ಕಣ್ಣೆದುರೇ ಗಂಡ ಸೂರಿ ನೀರಲ್ಲಿ ಕೊಂಚಿಕೊಂಡು ಹೋಗಿದ್ದ. ಆತನಿಗಾಗಿ ರಕ್ಷಣಾ ತಂಡ ಎಷ್ಟೇ ಹುಡುಕಾಟ ನಡೆಸಿದರೂ ಸುಳಿವೇ ಸಿಕ್ಕಿರಲಿಲ್ಲ. 'ನನ್ನ ಸೂರಿ ಸಿಕ್ಕುದ್ನಾ ಸಾರ್​, ಬೇಗ ಹುಡುಕಿಕೊಡಿ ಅಣ್ಣ. ಸೂರಿಯನ್ನು ಬಿಟ್ಟು ನಾನೊಬ್ಬಳೇ ಎಲ್ಲಿ ಹೋಗಲಿ.' ಎಂದು ಗೀತಾ ಬಿಕ್ಕಿಬಿಕ್ಕಿ ಅಳುತ್ತಾ ಸೆರಗೊಡ್ಡಿ ಅಂಗಲಾಚುತ್ತಿದ್ದ ದೃಶ್ಯ ನೆರೆದಿದ್ದರವ ಕರುಳು ಕಿವುಚಿದ್ದಂತೂ ಸುಳ್ಳಲ್ಲ.
 
ಎಸ್​ಡಿಆರ್​ಎಫ್, ಅಗ್ನಿಶಾಮಕ ದಳ, ನಗರಸಭೆ, ಪೊಲೀಸರು, ಸ್ಥಳೀಯರು ಸೂರಿಗಾಗಿ ಶೋಧ ಕಾರ್ಯ ನಡೆಸಿದ್ದರು. ಆತನ ಸುಳಿವೇ ಪತ್ತೆಯಾಗದ ಹಿನ್ನೆಲೆ ಕಾರ್ಯಾಚರಣೆ ಸ್ಥಗಿತಗೊಳಿಸಿದ್ದರು.
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments