ವೈಯಕ್ತಿಕ ವರ್ಚಸ್ಸು, ಅಭಿವೃದ್ಧಿ ಕೆಲಸ ಪರಮೇಶ್ವರ್ ‘ಕೈ’ ಹಿಡಿಯುತ್ತಾ?

Webdunia
ಬುಧವಾರ, 19 ಏಪ್ರಿಲ್ 2023 (09:11 IST)
ಕೊರಟಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ.ಪರಮೇಶ್ವರ ಪ್ರಬಲರಾಗಿದ್ದಾರೆ. ಪರಮೇಶ್ವರಗೆ ತನ್ನದೇ ಆದ ವರ್ಚಸ್ಸಿದೆ. ಸಚಿವರಾಗಿ, ಡಿಸಿಎಂ ಆಗಿ ಕೆಲಸ ಮಾಡಿದವರು. ಅಲ್ಲದೇ ಪಕ್ಷದಲ್ಲಿ ಪ್ರಭಾವಿ ನಾಯಕರಾಗಿದ್ದು, ಮುಖ್ಯಮಂತ್ರಿ ಸ್ಥಾನ ಆಕಾಂಕ್ಷಿಗಳ ಲಿಸ್ಟ್ನಲ್ಲಿದ್ದಾರೆ.
 
ಕಳೆದ ಎರಡು ವರ್ಷದಿಂದಲೇ ಚುನಾವಣೆ ತಯಾರಿ ಮಾಡಿಕೊಂಡಿರುವ ಜಿ.ಪರಮೇಶ್ವರ, ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಈ ಹಿಂದಿನದಕ್ಕಿಂತಲೂ ಹೆಚ್ಚಿನ ಅಭಿವೃದ್ಧಿ ಕೆಲಸ ಮಾಡಿರುವುದು ಚುನಾವಣೆಯಲ್ಲಿ ಅವರ ಕೈ ಹಿಡಿಯಬಹುದು. 

ಇನ್ನೊಂದು ದೃಷ್ಟಿಕೋನದಲ್ಲಿ ನೋಡುವುದಾದರೆ, ಜಿ.ಪರಮೇಶ್ವರ ಸಮುದಾಯದ ಮತ ಅತಿ ಕಡಿಮೆ ಇದೆ. ಈ ಬಾರಿ ಪರಮೇಶ್ವರರನ್ನೇ ಟಾರ್ಗೆಟ್ ಮಾಡಿರುವ ಬಿಜೆಪಿ ಈ ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಎಡಗೈ ಸಮುದಾಯದ ಅಭ್ಯರ್ಥಿಯನ್ನೇ ಕಣಕ್ಕಿಳಿಸಿದೆ. ಇದು ಪರಮೇಶ್ವರರಿಗೆ ಹೊಡೆತ ಕೊಡುವ ಸಾಧ್ಯತೆ ಇದೆ.

ಅಷ್ಟೇ ಅಲ್ಲದೇ ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಸದಾಶಿವ ಆಯೋಗದ ವರದಿ ಜಾರಿ ಮಾಡಲು ಹಿಂದೇಟು ಹಾಕಿದ್ದು ಸಹ ಈ ಬಾರಿ ಕೊರಟಗೆರೆ ಕ್ಷೇತ್ರದ ಚುನಾವಣೆಯಲ್ಲಿ ಪರಿಣಾಮ ಬೀರಬಹುದು. ಪರಮೇಶ್ವರ ವೈಟ್ ಕಾಲರ್ ರಾಜಕಾರಣಿ ಎಂಬ ಹಣೆಪಟ್ಟಿ ಕೂಡ ಹೊತ್ತಿರುವುದು ಪಕ್ಷಕ್ಕೆ ಹಿನ್ನಡೆ ತಂದೊಡ್ಡಬಹುದು ಎಂಬುದು ರಾಜಕೀಯ ತಜ್ಞರ ವಿಶ್ಲೇಷಣೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕತಾರ್ ನ ಅನಿಲ ಘಟಕಕ್ಕೆ ಇರಾನ್ ದಾಳಿ ಮಾಡಿದ್ದರಿಂದ ಭಾರತಕ್ಕೆ ಇನ್ನು ಇಷ್ಟು ವರ್ಷ ಸಮಸ್ಯೆ: ಶಾಕಿಂಗ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಅಮೆರಿಕಾ ಅಧ್ಯಕ್ಷರ ಹೇಳಿಕೆ ಬಳಿಕ ಮಹತ್ವದ ನಿರ್ಧಾರ ತೆಗೆದುಕೊಂಡ ಇಸ್ರೇಲ್: ಇದರಿಂದ ಭಾರತಕ್ಕೂ ಲಾಭವಾಗುತ್ತಾ

ಬುರ್ಖಾ ಹಾಕಿಕೊಂಡು ಅಪ್ಪ, ಮಗ ಮಾಡಿ ಖತರ್ನಾಕ್ ಕೆಲಸ ನೋಡಿ Video

ಸರ್ಕಾರೀ ಅಧಿಕಾರಿಗಳ ವರ್ಗಾವಣೆ ಅಲ್ಲ, ನಿಮ್ಮ ಕೆಲಸ ಬೇರೇಯೇ ಇದೆ: ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ಕ್ಲಾಸ್

ಮುಂದಿನ ಸುದ್ದಿ
Show comments