Webdunia - Bharat's app for daily news and videos

Install App

ನಗರದಲ್ಲಿ ಇಂದಿನ ಪೆಟ್ರೋಲ್ - ಡಿಸೇಲ್ ದರ ಹೀಗಿದೆ

Webdunia
ಭಾನುವಾರ, 15 ಮೇ 2022 (14:21 IST)
ನಿನ್ನೆಗೆ ಹೋಲಿಸಿದರೆ ರಾಜ್ಯದಲ್ಲಿ ಬಹುತೇಕ ಇಂದು ಇಂಧನ ಬೆಲೆಗಳಲ್ಲಿ ಸ್ವಲ್ಪ ವ್ಯತ್ಯಾಸವಾಗಿದೆ. ಕಳೆದ ಕೆಲ ದಿನಗಳಿಂದ ಭಾರತದಲ್ಲಿ ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ದರ(Petrol-Diesel Price)ಗಳು ಅತಿಶಯವಾದ ಏರಿಳಿತಗಳಿಲ್ಲದೆ ಸ್ಥಿರವಾಗಿವೆ.
 
ಅದರಲ್ಲೂ ವಿಶೇಷವಾಗಿ ಬೆಂಗಳೂರಿನಲ್ಲಿ (Bengaluru) ಕಳೆದ ಕೆಲವು ದಿನಗಳಿಂದ ಇಂಧನ ಬೆಲೆ ಸ್ಥಿರವಾಗಿದೆ. ಅತ್ತ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ (Crude oil) ಬೆಲೆಯೂ ಇಳಿಯುತ್ತಿಲ್ಲ, ಇತ್ತ ದೇಶದಲ್ಲಿ ನಿತ್ಯ ಒಂದಿಷ್ಟು ಪೈಸೆಗಳಷ್ಟು ಪೆಟ್ರೋಲ್-ಡಿಸೆಲ್ ಬೆಲೆಯಲ್ಲಿ ಏರಿಳಿತ ಆಗುತ್ತಲೇ ಇದೆ. ಕಳೆದ ಕೆಲ ದಿನಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಗಳಲ್ಲಿ ಹೆಚ್ಚಳವಾಗುತ್ತಿರುವುದು ಸುಳ್ಳಲ್ಲ. ಆದಾಗ್ಯೂ, ಕಳೆದ ಕೆಲ ದಿನಗಳಿಂದ ಬೆಲೆಯಲ್ಲಿ ಸ್ಥಿರತೆ ಕಂಡುಬರುತ್ತಿದ್ದು, ಇಂದಿನ ಬೆಲೆಯಲ್ಲಿ ಕೊಂಚ ವ್ಯತ್ಯಾಸವಾಗಿದೆ.
 
ಅಂತಾರಾಷ್ಟ್ರ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಳಿತವಾಗುತ್ತಿದ್ದು, ಬಹುತೇಕವಾಗಿ ಒಂದೇ ಬೆಲೆಯಲ್ಲೇ ಸಿಗುತ್ತಿದೆ. ಇದರ ಪರಿಣಾಮವಾಗಿ ದೇಶದಲ್ಲಿ ನಿತ್ಯವೂ ಒಂದಿಷ್ಟು ಪೈಸೆಗಳಷ್ಟು ಇಂಧನದ ಬೆಲೆಗಳಲ್ಲಿ ಏರಿಕೆಯಾಗುತ್ತಿದ್ದು ಜನಸಾಮಾನ್ಯರ ಜೇಬಿಗೆ ಕತ್ತರಿ ಬೀಳುತ್ತಿದೆ.
 
ಒಂದೆಡೆ ಜಗತ್ತಿನಾದ್ಯಂತ ಕಚ್ಚಾ ತೈಲದ ಬೆಲೆ ಗಗನಮುಖಿಯಾಗಿಯೇ ಇದ್ದು ಇಳಿಮುಖವಾಗುತ್ತಿಲ್ಲ. ಇನ್ನೊಂದೆಡೆ ರಷ್ಯಾ-ಉಕ್ರೇನ್ ಮಧ್ಯದ ಸಂಘರ್ಷ ಮುಕ್ತಾಯವಾಗುವ ಸೂಚನೆಯೂ ಕಾಣುತ್ತಿಲ್ಲವಾದ್ದರಿಂದ ತೈಲದ ಬೆಲೆ ಮೇಲೆ ಪರಿಣಾಮ ಬೀರಿದೆ.
 
ರಾಜಧಾನಿ ಬೆಂಗಳೂರು ನಗರದಲ್ಲಿ ನಿನ್ನೆಗೆ ಹೋಲಿಸಿದರೆ ಇಂದೂ ಸಹ ಪೆಟ್ರೋಲ್ ಬೆಲೆಯಲ್ಲಿ ಹೆಚ್ಚಳವಾಗಿಲ್ಲ. ನಗರದಲ್ಲಿ ಇಂದಿನ ಪೆಟ್ರೋಲ್ ದರ ರೂ. 111.09 ಆಗಿದ್ದರೆ ಡೀಸೆಲ್ ದರ ರೂ. 94.79 ಆಗಿದೆ. ಮಹಾನಗರಗಳಾದ ಚೆನ್ನೈ, ಮುಂಬೈ, ಕೊಲ್ಕತ್ತಾಗಳಲ್ಲಿ ಇಂದಿನ ಪೆಟ್ರೋಲ್ ದರಗಳು ಕ್ರಮವಾಗಿ ರೂ.110.85, ರೂ. 120.51, ರೂ. 115.12 ಆಗಿದ್ದರೆ ಡೀಸೆಲ್ ದರಗಳು ಕ್ರಮವಾಗಿ ರೂ. 100.94, ರೂ. 104.77, ರೂ. 99.83 ಆಗಿವೆ. ಇನ್ನು ಉಳಿದಂತೆ ರಾಜಧಾನಿ ದೆಹಲಿಯಲ್ಲಿ ಇಂದಿನ ಪೆಟ್ರೋಲ್ ದರ ರೂ. 105.41 ಆಗಿದ್ದರೆ ಡೀಸೆಲ್ ದರ ರೂ. 96.67 ಆಗಿದೆ.
 
ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು:
 
ಬಾಗಲಕೋಟೆ - ರೂ. 111.59 (00)
ಬೆಂಗಳೂರು - ರೂ. 111.09 (00)
ಬೆಂಗಳೂರು ಗ್ರಾಮಾಂತರ - ರೂ. 110.74 (42 ಪೈಸೆ ಇಳಿಕೆ)
ಬೆಳಗಾವಿ - ರೂ. 111.42 (22 ಪೈಸೆ ಇಳಿಕೆ)
ಬಳ್ಳಾರಿ - ರೂ. 112.33 (70 ಪೈಸೆ ಇಳಿಕೆ)
ಬೀದರ್ - ರೂ. 111.69 (06 ಪೈಸೆ ಏರಿಕೆ)
ವಿಜಯಪುರ - ರೂ. 111.21 (40 ಪೈಸೆ ಏರಿಕೆ)
ಚಾಮರಾಜನಗರ - ರೂ. 111.18 (14 ಪೈಸೆ ಏರಿಕೆ)
ಚಿಕ್ಕಬಳ್ಳಾಪುರ - ರೂ. 111.56 (47 ಪೈಸೆ ಏರಿಕೆ)
ಚಿಕ್ಕಮಗಳೂರು - ರೂ. 112.36 (41 ಪೈಸೆ ಇಳಿಕೆ)
ಚಿತ್ರದುರ್ಗ - ರೂ. 112.51 (35 ಪೈಸೆ ಏರಿಕೆ)
ದಕ್ಷಿಣ ಕನ್ನಡ - ರೂ. 110.29 (63 ಪೈಸೆ ಇಳಿಕೆ)
ದಾವಣಗೆರೆ - ರೂ. 112.61 (6 ಪೈಸೆ ಇಳಿಕೆ)
ಧಾರವಾಡ - ರೂ. 110.84 (12 ಪೈಸೆ ಇಳಿಕೆ)
ಗದಗ - ರೂ. 111.92 (60 ಪೈಸೆ ಏರಿಕೆ)
ಕಲಬುರಗಿ - ರೂ. 111.32 (8 ಪೈಸೆ ಏರಿಕೆ)
ಹಾಸನ - ರೂ. 111.10 (6 ಪೈಸೆ ಇಳಿಕೆ)
ಹಾವೇರಿ - ರೂ. 111.71 (00)
ಕೊಡಗು - ರೂ. 111.85 (00)
ಕೋಲಾರ - ರೂ. 111.03 (00)
ಕೊಪ್ಪಳ - ರೂ. 111.99 (00)
ಮಂಡ್ಯ - ರೂ. 110.85 (31 ಪೈಸೆ ಇಳಿಕೆ)
ಮೈಸೂರು - ರೂ. 110.79 (5 ಪೈಸೆ ಇಳಿಕೆ)
ರಾಯಚೂರು - ರೂ. 111.86 (81 ಪೈಸೆ ಏರಿಕೆ)
ರಾಮನಗರ - ರೂ. 111.56 (12 ಪೈಸೆ ಏರಿಕೆ)
ಶಿವಮೊಗ್ಗ - ರೂ. 112.90 (00)
ತುಮಕೂರು - ರೂ. 112.13 (68 ಪೈಸೆ ಇಳಿಕೆ)
ಉಡುಪಿ - ರೂ. 110.60 (39 ಪೈಸೆ ಇಳಿಕೆ)
ಉತ್ತರ ಕನ್ನಡ - ರೂ. 113.30 (2 ರೂ. 15 ಪೈಸೆ ಏರಿಕೆ)
ಯಾದಗಿರಿ - ರೂ. 111.53 (36 ಪೈಸೆ ಇಳಿಕೆ)
 
ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು
 
ಬಾಗಲಕೋಟೆ - ರೂ. 95.26
ಬೆಂಗಳೂರು - ರೂ. 94.79
ಬೆಂಗಳೂರು ಗ್ರಾಮಾಂತರ - ರೂ. 94.48
ಬೆಳಗಾವಿ - ರೂ. 95.11
ಬಳ್ಳಾರಿ - ರೂ. 96.56
ಬೀದರ್ - ರೂ. 95.35
ವಿಜಯಪುರ - ರೂ. 94.92
ಚಾಮರಾಜನಗರ - ರೂ. 94.87
ಚಿಕ್ಕಬಳ್ಳಾಪುರ - ರೂ. 95.21
ಚಿಕ್ಕಮಗಳೂರು - ರೂ. 95.91
ಚಿತ್ರದುರ್ಗ - ರೂ. 95.94
ದಕ್ಷಿಣ ಕನ್ನಡ - ರೂ. 94.03
ದಾವಣಗೆರೆ - ರೂ. 96.04
ಧಾರವಾಡ - ರೂ. 94.59
ಗದಗ - ರೂ. 95.56
ಕಲಬುರಗಿ - ರೂ. 95.02
ಹಾಸನ - ರೂ. 94.67
ಹಾವೇರಿ - ರೂ. 95.37
ಕೊಡಗು - ರೂ. 95.44
ಕೋಲಾರ - ರೂ. 94.74
ಕೊಪ್ಪಳ - ರೂ. 95.62
ಮಂಡ್ಯ - ರೂ. 94.57
ಮೈಸೂರು - ರೂ. 94.52
ರಾಯಚೂರು - ರೂ. 95.52
ರಾಮನಗರ - ರೂ. 95.21
ಶಿವಮೊಗ್ಗ - ರೂ. 96.34
ತುಮಕೂರು - ರೂ. 95.73
ಉಡುಪಿ - ರೂ. 94.31
ಉತ್ತರ ಕನ್ನಡ - ರೂ. 96.69
ಯಾದಗಿರಿ - ರೂ. 95.21

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments