ನಾಳೆ ಪೆಟ್ರೋಲ್ ಬಂಕ್ ಮಾಲೀಕರ ಮುಷ್ಕರ ಇಲ್ಲ

Webdunia
ಗುರುವಾರ, 12 ಅಕ್ಟೋಬರ್ 2017 (09:37 IST)
ಬೆಂಗಳೂರು: ವಾಹನ ಸವಾರರಿಗೆ ಪೆಟ್ರೋಲ್ ಬಂಕ್ ಮಾಲೀಕರು ಸಿಹಿ ಸುದ್ದಿ ನೀಡಿದ್ದಾರೆ. ನಾಳೆಯಿಂದ ಮುಷ್ಕರ ನಡೆಸಲು ತೀರ್ಮಾನಿಸಿದ್ದ ಪೆಟ್ರೋಲ್ ಬಂಕ್ ಮಾಲೀಕರು ಮುಷ್ಕರವನ್ನು ವಾಪಸ್ ಪಡೆದಿದ್ದಾರೆ.

ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ನ್ನು ಜಿಎಸ್‍ಟಿ ವ್ಯಾಪ್ತಿಗೆ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಪೆಟ್ರೋಲ್-ಡೀಸೆಲ್ ಡೀಲರ್ಸ್ ಅಸೋಸಿಯೇಷನ್ ನಾಳೆ ದೇಶಾದ್ಯಂತ ಪೆಟ್ರೋಲ್ ಬಂಕ್ ಬಂದ್ ನಡೆಸಲು ನಿರ್ಧರಿಸಿತ್ತು. ಸರ್ಕಾರ ನಿತ್ಯ ದರದ ಪರಿಷ್ಕರಣೆ ಕೈ ಬಿಡಲು ಹಾಗೂ ಅಪೂರ್ಣ ಚಂದ್ರ ಕಮಿಟಿ ವರದಿ ಜಾರಿ ಮಾಡುವಂತೆ ಒತ್ತಾಯಿಸಿ ಮೂರುದಿನ ಪೆಟ್ರೋಲ್ ಬಂಕ್ ಬಂದ್ ಮಾಡಲು ಪೆಟ್ರೋಲ್ ಮಾಲೀಕರ ಸಂಘ ನಿರ್ಧರಿಸಿತ್ತು.

ಆದರೆ ತೈಲ ಕಂಪನಿಗಳು ಮಾತುಕತೆ ಗೆ ಮುಂದಾದ ಹಿನ್ನೆಲೆಯಲ್ಲಿ ಬಂಕ್ ಮಾಲೀಕರು ಈ ಮುಷ್ಕರವನ್ನು ಹಿಂದಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಒಂದು ವೇಳೆ ಕೇಂದ್ರ ಸರ್ಕಾರ ಪೆಟ್ರೋಲ್-ಡೀಸೆಲ್ ಅನ್ನು ಜಿಎಸ್‍ಟಿ ವ್ಯಾಪ್ತಿಗೆ ತೆಗೆದುಕೊಳ್ಳದಿದ್ದರೆ, ಅ. 27 ರಿಂದ ಅನಿರ್ಧಿಷ್ಟಾವಧಿ ಬಂದ್ ನಡೆಸುವುದಾಗಿ ಪೆಟ್ರೋಲ್ ಡೀಸೆಲ್ ಡೀಲರ್ಸ್ ಅಸೋಸಿಯೇಷನ್ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇರಾನ್ ಕೇಂದ್ರ ಸ್ಥಾನದ ಮೇಲೆ ಇಸ್ರೇಲ್ ದಾಳಿ: ತುರ್ತು ಪರಿಸ್ಥಿತಿ ಘೋಷಣೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಜೈನ ಮಂದಿರದ ಮುಂದೆ ಯಾಕೆ ನಾನ್ ವೆಜ್ ಬಿಸಾಕಿದ್ರಿ: ಬುರ್ಖಾಧಾರಿ ಮಹಿಳೆಯನ್ನು ತರಾಟೆಗೆ ತೆಗೆದುಕೊಂಡ ಪಬ್ಲಿಕ್ Video

ಚಿಲ್ಲರೆ ಬಾಕಿ ಮೊತ್ತಕ್ಕಾಗಿ ಕರೆ ಮಾಡಿದ ಕೆನರಾ ಬ್ಯಾಂಕ್: ರೈತನ ತಿರುಗೇಟು ಜೀವಮಾನದಲ್ಲಿ ಮರೆಯಲ್ಲ ಬ್ಯಾಂಕ್ Video

ಮುಂದಿನ ಸುದ್ದಿ
Show comments