Webdunia - Bharat's app for daily news and videos

Install App

ಪೆಟ್ರೋಲ್ ಟ್ಯಾಂಕರ್ ಪಲ್ಟಿ: ಗ್ರಾಮಸ್ಥರ ಮುಂಜಾಗೃತೆಯಿಂದ ತಪ್ಪಿದ ಅನಾಹುತ

Webdunia
ಬುಧವಾರ, 26 ಡಿಸೆಂಬರ್ 2018 (17:03 IST)
ಪೆಟ್ರೋಲ್ ತುಂಬಿದ್ದ ಟ್ಯಾಂಕರ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಗ್ರಾಮಸ್ಥರು ಭಯದಲ್ಲೇ ರಾತ್ರಿ ಕಳೆದ ಘಟನೆ ನಡೆದಿದೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ತಡರಾತ್ರಿ ಜತ್ತ ಜಾಂಬೋಟಿ ರಾಜ್ಯ ಹೆದ್ದಾರಿಯಲ್ಲಿ ಎಸ್ ಆರ್ ಕಂಪನಿಗೆ ಸೇರಿದ ಪೆಟ್ರೋಲ್ ತುಂಬಿದ್ದ ಟ್ಯಾಂಕರ್ ಹಲ್ಯಾಳ ಗ್ರಾಮದಲ್ಲಿ ಪಲ್ಟಿಯಾಗಿದ್ದು ಟ್ಯಾಂಕರ್ ನಿಂದ ಪೆಟ್ರೋಲ್ ಹೊರಚೆಲ್ಲಿದ ಪರಿಣಾಮ ಬೆಂಕಿ ಅವಘಡ ಸಂಭವಿಸಿ ಟ್ಯಾಂಕರ್ ಸ್ಫೋಟಗೊಳ್ಳುವ ಅನಾಹುತ ಗ್ರಾಮಸ್ಥರ ಮುನ್ನೆಚ್ಚರಿಕೆ ಕ್ರಮದಿಂದ ತಪ್ಪಿದೆ. ಸ್ಥಳಕ್ಕೆ ದೌಡಾಯಿಸಿ ಬಂದ ಅಥಣಿಯ ಪೊಲೀಸ್ ಇಲಾಖೆ, ಅಗ್ನಿಶಾಮಕ ಸಿಬ್ಬಂದಿ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಉಪವಿಭಾಗಾಧಿಕಾರಿ ರವೀಂದ್ರ ಕರಲಿಂಗಣ್ಣವರ ನೇತೃತ್ವದಲ್ಲಿ ಸತತ ಐದು ಗಂಟೆ ಕಾರ್ಯಾಚರಣೆ ನಡೆಸುವ ಮೂಲಕ ಪಲ್ಟಿಯಾಗಿದ್ದ ಟ್ಯಾಂಕರ್ ಮೇಲಕ್ಕೆ ಎತ್ತಿ ಸಂಚಾರ ಸುಗಮಗೊಳಿಸಿದ್ದಾರೆ.
ಇನ್ನೂ ಹಲ್ಯಾಳ ಗ್ರಾಮದಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ ಆಗುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಗ್ರಾಮಸ್ಥರು ಡಂಗುರ ಸಾರುವ ಮೂಲಕ ಬೆಂಕಿ ಕಡ್ಡಿಗೀರದಂತೆ ಮನವಿ ಮಾಡಿದರು. ಜನರು ಬೆಳಗಿನ ಕಾರ್ಯಾಚರಣೆ ಮುಗಿಯುವವರೆಗೂ ಒಲೆ ಹೊತ್ತಿಸದೆ ಕಾಯುವ ಸ್ಥಿತಿ ಕೂಡ ನಿರ್ಮಾಣವಾಗಿತ್ತು.

ಈ ಮಧ್ಯೆ ಸಿಕ್ಕವರಿಗೆ ಸೀರುಂಡೆ ಅನ್ನುವ ಹಾಗೆ ಟ್ಯಾಂಕರ್ ನಿಂದ ಚೆಲ್ಲುತ್ತಿದ್ದ ಪೆಟ್ರೋಲ್ ತುಂಬಿಕೊಳ್ಳಲು ಜನರು ಮುಗಿಬಿದ್ದಿದ್ದು ಕೊಡ, ಬಕೇಟು, ಕ್ಯಾನುಗಳಲ್ಲಿ ಪೆಟ್ರೋಲ್ ತೆಗೆದುಕೊಂಡು ಹೋಗುತ್ತಿದ್ದರು.

ಆದರೆ ಅಧಿಕಾರಿಗಳ ಚುರುಕು ಕಾರ್ಯಾಚರಣೆಯಿಂದ ಭಾರಿ ಅನಾಹುತವೊಂದು ತಪ್ಪಿದಂತಾಗಿದೆ. 


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ನಾವು ಹಿಂದೂಗಳಂತಲ್ಲ, ಕಾಶ್ಮೀರ ಯಾವತ್ತಿದ್ರೂ ನಮ್ಮದೇ, ಶತ್ರುಗಳು ಏನೂ ಮಾಡಕ್ಕಾಗಲ್ಲ: ಪಾಕ್ ಸೇನಾ ಮುಖ್ಯಸ್ಥ

West Bengal: ಪಶ್ಚಿಮ ಬಂಗಾಲದಲ್ಲಿ ವಕ್ಫ್ ಗಲಾಟೆಯಲ್ಲಿ ಸುಟ್ಟು ಕರಕಲಾದ ಸೀರೆಅಂಗಡಿ ವಿಡಿಯೋ ನೋಡಿದ್ರೆ ಕರುಳು ಚುರಕ್ ಅನ್ನುತ್ತೆ

Arecanut price today: ಅಡಿಕೆ ಬೆಳೆಗಾರರಿಗೆ ನೆಮ್ಮದಿ ಕೊಡುವ ಸುದ್ದಿ, ಇಂದಿನ ಬೆಲೆ ಎಷ್ಟಾಗಿದೆ ನೋಡಿ

Gold Price today: ಲಕ್ಷದ ಸನಿಹದಲ್ಲಿ ಚಿನ್ನದ ಬೆಲೆ, ಇಂದಿನ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ

Kukke Subramanya: ಕರ್ನಾಟಕದ ಶ್ರೀಮಂತ ದೇವಾಲಯ ಕುಕ್ಕೆ ಸುಬ್ರಹ್ಮಣ್ಯ: ಆದಾಯವೆಷ್ಟು ನೋಡಿ

ಮುಂದಿನ ಸುದ್ದಿ
Show comments