ಪಿಎಫ್‌ಐ ಆಸ್ತಿ ಮುಟ್ಟುಗೋಲು ಸಿದ್ಧತೆ..!!!

Webdunia
ಗುರುವಾರ, 29 ಸೆಪ್ಟಂಬರ್ 2022 (14:07 IST)
ಪಿಎಓಫ್‌ ಸರ್ವೆ ಮುಗಿದ ಕೂಡಲೇ ವಶಕ್ಕೆ ಪಡೆದುಕೊಂಡ ಮುಖಂಡರ ಆಸ್ತಿ ಮುಟ್ಟುಗೋಲು ಮಾಡಲಾಗುತ್ತದೆ ಎಂದು ಸುಳಿವು ನೀಡಿದ್ದಾರೆ.
 
ಪಿಎಫ್‌ಐ ನಿಷೇಧಗೊಳಿಸಿದ ಕೇಂದ್ರ ಸರ್ಕಾರ ಪಿಎಫ್‌ಐ ನಅಧಿಕೃತ ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಂಡಿತ್ತು. ಈ ಖಾತೆಗಳಲ್ಲಿ ಕೋಟ್ಯಾಂತರ ರೂ ಹಣವಿದ್ದು, ಇದನ್ನು ಹೊರತುಪಡಿಸಿ ಕೋಟ್ಯಾಂತರ ರೂ ಹಣ ಸಂಘಟನೆ ಬಳಿಯಿದೆ ಎಂಬ ಮಾಹಿತಿ ಲಭ್ಯವಾಗಿದೆ.
 
ಕೆಲವು ಸಾಮಾನ್ಯ ಕಾರ್ಯಕರ್ತರ ಖಾತೆಯಲ್ಲಿ ಲಕ್ಷಾಂತರ ರೂ ಹಣ ಪತ್ತೆಯಾಗಿದೆ. ಇದು ದೇಶ, ವಿದೇಶಗಳಿಂದ ಬಂದಿರುವ ದೇಣಿಗೆ ಹಣವಾಗಿದ್ದು, ಯುಪಿಐ ಕೋಡ್, ಕ್ಯು ಆರ್ ಕೋಡ್ ಮೂಲಕ ಹಣವನ್ನು ಹಲವು ಬಾರಿ ವರ್ಗಾವಣೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
 
ಪಿಎಫ್​ಐ ನಿಷೇಧ ಆದೇಶ ಹೊರಬಿದ್ದ ನಂತರ ಮಂಗಳೂರಿನ 12 ಪಿಎಫ್​​ಐ ಕಚೇರಿಗಳಿಗೆ ಬೀಗ ಹಾಕಲಾಗಿದೆ. .. ಕಮಿಷನರ್ ಎನ್.ಶಶಿಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಮಂಗಳೂರು, ಪಣಂಬೂರು, ಸುರತ್ಕಲ್, ಬಜ್ಪೆ, ಉಳ್ಳಾಲ, ಕೋಣಾಜೆ ಸೇರಿದಂತೆ ಹಲವು ಕಡೆ ತಡರಾತ್ರಿವರೆಗೂ ಪೊಲೀಸರು ಕಾರ್ಯಾಚರಣೆ ನಡೆಸಿದರು.
 
ಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಮತ್ತು ಅದರ ಅಂಗಸಂಸ್ಥೆಗಳ ಮೇಲೆ ಭಯೋತ್ಪಾದನಾ ವಿರೋಧಿ ಕಾನೂನಿನ ಅಡಿಯಲ್ಲಿ ಐದು ವರ್ಷಗಳ ನಿಷೇಧದ ನಂತರ, ಗೃಹ ಸಚಿವಾಲಯವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪೊಲೀಸ್ ಮುಖ್ಯಸ್ಥರಿಗೆ ಸಂಘಟನೆಯ ಇತರ ಕಚೇರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಮತ್ತು ಹಣವನ್ನು ವಶಪಡಿಸಿಕೊಳ್ಳಲು ಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಟುಂಬದ ಮಹಿಳೆಗೆ 2ಸಾವಿರ, ಪುರುಷರಿಗೆ ಉಚಿತ ಬಸ್ ಸೇವೆ: ಎಐಎಡಿಎಂಕೆ ಪ್ರಣಾಳಿಕೆ

ಬಿಯರ್ ಕುಡಿಯುತ್ತಾ ಬೈಕ್ ಚಾಲನೆ ಮಾಡಿದ ಮೂವರು ವೈದ್ಯರಿಗೆ ಬಿಗ್‌ಶಾಕ್‌

ಪಶ್ಚಿಮ ಏಷ್ಯಾ ಸಂಘರ್ಷ: ಟ್ರಂಪ್ ಜತೆ ಮಹತ್ವದ ಪ್ರಧಾನಿ ನರೇಂದ್ರ ಮೋದಿ ಮಹತ್ವದ ಮಾತುಕತೆ

ಕೊನೆಯಾಯಿತು 13ವರ್ಷಗಳ ನೋವು: ದಯಾಮರಣ ಪಡೆದ ಹರೀಶ್ ರಾಣಾ ಇನ್ನಿಲ್ಲ

ರಾಜ್ಯ ಹವಾಮಾನದಲ್ಲಿ ಭಾರೀ ಬದಲಾವಣೆ, ಬೆಂಗಳೂರಿನಲ್ಲಿ ಮಳೆಯಾಗುತ್ತಾ

ಮುಂದಿನ ಸುದ್ದಿ
Show comments