Webdunia - Bharat's app for daily news and videos

Install App

ಹಂದಿ ಸಾಕುವ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಫೋಟೋಗ್ರಾಫರ್

Webdunia
ಶನಿವಾರ, 28 ಮೇ 2016 (16:20 IST)
ಫೋಟೋಗ್ರಾಫರ್ ಒಬ್ಬನಿಂದ ಹಂದಿ ಸಾಕಾಣಿಕೆ ಮಾಡುವ ಮಹಿಳೆ ಮೇಲೆ ಅತ್ಯಾಚಾರ ಪ್ರಯತ್ನ ನಡೆದಿರುವಂತಹ ಹೇಯ ಕೃತ್ಯ ಮಡ್ಯ ಜಿಲ್ಲೆಯ ಪಾಂಡವಪುರದಲ್ಲಿ ನಡೆದಿದೆ.
 
ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಹಂದಿ ಸಾಕಾಣಿಕೆ ಮಾಡಿ ಜೀವನ ಸಾಗಿಸುತ್ತಿದ್ದ ಮಹಿಳೆಯ ಮೇಲೆ ಶಿವಮೊಗ್ಗ ಜಿಲ್ಲೆಯ ಫೋಟೋಗ್ರಾಫರ್ ಗುಣಶೇಖರ್ ಎಂಬ ಕಾಮುಕ ಅತ್ಯಾಚಾರವೆಸಗಲು ಪ್ರಯತ್ನಪಟ್ಟಿದ್ದಾನೆ. ಸಂತ್ರಸ್ಥೆಯ ಗುಡಿಸಲಿನ ಬಳಿ ಕಾಮುಕ ಗುಣಶೇಖರ್‌ನ ವ್ಯಾಲೇಟ್ ಪತ್ತೆಯಾಗಿದೆ. ಈ ವ್ಯಾಲೇಟ್‌ನಲ್ಲಿ ಕಾಮುಕನ ಪ್ರಮುಖ ದಾಖಲೆಗಳು ಲಭ್ಯವಾಗಿದೆ. ಸಂತ್ರಸ್ಥೆ ಮಹಿಳೆ ದಾಖಲೆ ಸಮೇತ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಲು ಹೋದರೆ, ಘಟನಾ ಸ್ಥಳ ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ಹೇಳಿ ಪೊಲೀಸರು ದೂರು ಸ್ವೀಕರಿಸುವಲ್ಲಿ ನಿರ್ಲಕ್ಷ ತೊರಿದ್ದಾರೆ.
 
ಇಂತ ಪೈಶಾಚಿಕ ಕೃತ್ಯದಿಂದ ಬೇಸತ್ತ ಮಹಿಳೆ, ಮಂಡ್ಯ ಜಿಲ್ಲೆಯ ಡಿಸಿ ಕಛೇರಿಯ ಬಳಿ ತೆರಳಿ ಮಹಿಳಾ ಆಯೋಗದ ಅಧ್ಯಕ್ಷೆ ಮಂಜುಳಾ ಮಾನಸ್ ಅವರನ್ನು ಭೇಟಿ ಮಾಡಿ ತನ್ನ ಅಳಲನ್ನು ತೊಡಿಕೊಂಡಿದ್ದಾಳೆ.
 
ಮಹಿಳೆ ನೀಡಿರುವ ವಿವರಣೆ ಕೇಳಿ ಬೆಚ್ಚಿಬಿದ್ದ ಮಂಜುಳಾ ಮಾನಸ್, ತಕ್ಷಣವೇ ಶ್ರೀರಂಗಪಟ್ಟಣ ಡೈವೈಎಸ್‌ಪಿ ಅವರಿಗೆ ಕರೆ ಮಾಡಿ ತರಾಟೆಗೆ ತೆಗೆದುಕೊಂಡರು. ಈ ಕುರಿತು ತಕ್ಷಣ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.


ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಮುಂದಿನ ಸುದ್ದಿ
Show comments