Webdunia - Bharat's app for daily news and videos

Install App

ದಿವ್ಯಾಂಗ ಮಕ್ಕಳು ದೇವರ ಸಮಾನ ತಿಳಿಯಿರಿ

Webdunia
ಬುಧವಾರ, 7 ಡಿಸೆಂಬರ್ 2016 (08:55 IST)
ಬುದ್ಧಿಮಾಂದ್ಯ ಮಕ್ಕಳಿಗೆ ಪಾಠ ಕಲಿಸುವುದು ಕಷ್ಟಕರ ಕೆಲಸವಾಗಿದ್ದು, ಶಿಕ್ಷಕರು ಈ ದಿವ್ಯಾಂಗ ಮಕ್ಕಳನ್ನು ದೇವರ ಸಮಾನವೆಂದು ತಿಳಿದು ಉತ್ತಮ ಶಿಕ್ಷಣ ಒದಗಿಸಬೇಕೆಂದು ಆರ್.ಎಂ.ಎಸ್.ಎ. ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ ಶರಣಪ್ಪ ಕೋಬಾಳಕರ್ ಹೇಳಿದರು.
 
ಅವರು ಕಲಬುರಗಿಯ ಪರಿವರ್ತನಾ ಬುದ್ಧಿಮಾಂದ್ಯ ಶಾಲೆಯಲ್ಲಿ ಕಲಬುರಗಿ ತಾಲೂಕುನ ಬ್ಲಾಕ್ ಮಟ್ಟದ ವಿಸ್ವ ವಿಕಲಚೇತನರ ದಿನಾಚರಣೆಯಲ್ಲಿ ಮಾತನಾಡಿದರು. ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡರಂಗಪ್ಪ ಕಾರ್ಯಕ್ರಮ ಉದ್ಘಾಟಿಸಿ ದಿವ್ಯಾಂಗರಿಗೆ ಅನುಕಂಪ ಬೇಡ ಅವಕಾಶ ಕಲ್ಪಿಸುವುದು ಅತ್ಯವಶ್ಯಕ. ಅವರನ್ನು ಹೀನಾಯವಾಗಿ ಕಾಣದೆ ಶಿಕ್ಷಣದಲ್ಲಿ ಹೆಚ್ಚಿನ ಪ್ರಗತಿ ಸಾಧಿಸಲು ಪ್ರೋತ್ಸಾಹಿಸಬೇಕೆಂದರು.
 
ಮಹಾನಿಂಗಪ್ಪ ಮೂಲಗೆ, ಅಮಾತೆಪ್ಪ, ಗಿರಿಜಾ ರೇವೂರ, ಬಾಬು ಮೌರ್ಯ ಮತ್ತಿತರರು ಕಾಯಕ್ರಮದಲ್ಲಿ ಪಾಲ್ಗೊಂಡಿದ್ದರು. ಹಣಮಂತ ಸಿ.ರೇವಣೋರ ಸ್ವಾಗತಿಸಿದರು. ಕರಬಸಪ್ಪ ಚೇಂಗಟಿ ವಂದಿಸಿದರು. ಕಾರ್ಯಕ್ರಮದ ಅಂಗವಾಗಿ ಕ್ರೀಡೆಗಳಲ್ಲಿ ವಿಜೇತರಾದ ಹಾಗೂ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಹಾಗೂ ಬಹುಮಾನಗಳನ್ನು ವಿತರಿಸಲಾಯಿತು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments