Publish Date: Mon, 01 Aug 2016 (17:30 IST)
Updated Date: Mon, 01 Aug 2016 (17:33 IST)
ಸಿಎಂ ಪುತ್ರ ರಾಕೇಶ್ ಸಿದ್ದರಾಮಯ್ಯ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಆಗಮಿಸಿದ ಜನರ ಜೇಬಿಗೆ ಕತ್ತರಿ ಹಾಕುವ ಮೂಲಕ ಜೇಬುಗಳ್ಳರು ಅಟ್ಟಹಾಸ ಮೆರೆದಿದ್ದಾರೆ.
ಬಹು ಅಂಗಾಂಗ ವೈಫಲ್ಯದಿಂದ ಬೆಲ್ಜಿಯಂ ರಾಷ್ಟ್ರದಲ್ಲಿ ನಿಧನರಾದ ಸಿಎಂ ಸಿದ್ದರಾಮಯ್ಯ ಜೇಷ್ಠಪುತ್ರ ರಾಕೇಶ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕಾಗಿ ಮೈಸೂರಿನ ದಸರಾ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಅವಕಾಶ ನೀಡಲಾಗಿದೆ.
ರಾಕೇಶ್ ಅವರ ಪಾರ್ಥಿವ ಶರೀರರದ ಅಂತಿಮ ದರ್ಶನ ಪಡೆಯಲು ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದು, ಈ ವೇಳೆ ಜೇಬುಗಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ.
ಅಂತಿಮ ದರ್ಶನಕ್ಕಾಗಿ ಬಂದಿದ್ದ ರಾಕೇಶ್ ಅಭಿಮಾನಿಯೊಬ್ಬರ ಜೇಬಿಗೆ ಕತ್ತರಿ ಹಾಕಿ 25 ಸಾವಿರ ರೂಪಾಯಿ ಎಗರಿಸಿದ ಜೇಬುಗಳ್ಳರು, ಮತ್ತೊಬ್ಬರ ಜೇಬಿಗೆ ಕೈಹಾಕುವ ವಿಫಲ ಯತ್ನ ನಡೆಸಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.