Webdunia - Bharat's app for daily news and videos

Install App

8 ಕೆಜಿ ತೂಕದ ಹಂದಿ ಚಿಪ್ಪುಗಳು ಪೊಲೀಸ್ ವಶ, ಬಳ್ಳಾರಿ ಮೂಲದ ಇಬ್ಬರ ಬಂಧನ

Webdunia
ಶುಕ್ರವಾರ, 22 ಅಕ್ಟೋಬರ್ 2021 (18:48 IST)
ಬೆಂಗಳೂರು: ಹಂದಿಯ ಚಿಪ್ಪುಗಳನ್ನು ಮಾರಾಟ ಬಂದಿದ್ದ ಬಳ್ಳಾರಿ ಮೂಲದ ಇಬ್ಬರು ಆರೋಪಿಗಳನ್ನು ನಗರದ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿ 8 ಕೆ.ಜಿ  200 ಗ್ರಾಂ ತೂಕದ ಹಂದಿ ಚಿಪ್ಪುಗಳನ್ನು ವಶಪಡಿಸಿಕೊಂಡಿದ್ದಾರೆ. 
 
ಬಳ್ಳಾರಿ ಜಿಲ್ಲೆಯ ಸಂಡೂರು ನಿವಾಸಿಗಳಾದ ಇಬ್ರಾಹಾಂ ಮತ್ತು ಮರಿಸ್ವಾಮಿ ಬಂಧಿತ ಆರೋಪಿಗಳು. ಇಬ್ಬರು ಕಾನೂನು ಬಾಹಿರವಾಗಿ ಅಳಿವಿನಂಚಿನಲ್ಲಿರುವ ಚಿಪ್ಪು ಹಂದಿಯ ಮೇಲ್ಮೈ ಚಿಪ್ಪುಗಳನ್ನು ಸಂಗ್ರಹಿಸ್ಕೊಂಡು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಮಾಹಿತಿ ಪೊಲೀಸ್ ಇಲಾಖೆಗೆ  ದೊರೆತಿತ್ತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 
 
ಕಾರ್ಯಪ್ರವೃತ್ತರಾದ ಸಿಬ್ಬಂದಿ  ದಾಳಿ ನೆಡಸಿ ಇಬ್ಬರನ್ನು ಬಂಧಿಸಿದ್ದಾರೆ . ಹಂದಿಯ ಚಿಪ್ಪುಗಳನ್ನು ಸ್ಥಳದಲ್ಲಿಯೇ ವಶಪಡಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ. 
 
ವನ್ಯ ಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ: 
 
ಪ್ರಕರಣದ ಕುರಿತು ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ವನ್ಯ ಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
vanya

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments