Select Your Language

Notifications

webdunia
webdunia
webdunia
webdunia

ಮಹಿಳಾ ಮತದಾರರಲ್ಲಿ ಅರಿವು ಮೂಡಿಸುವ ಪಿಂಕಥಾನ್ ಕಾರ್ಯಕ್ರಮ

ಮಹಿಳಾ ಮತದಾರರಲ್ಲಿ ಅರಿವು ಮೂಡಿಸುವ ಪಿಂಕಥಾನ್ ಕಾರ್ಯಕ್ರಮ
bangalore , ಸೋಮವಾರ, 8 ಮೇ 2023 (14:41 IST)
ತುಷಾರ್ ಗಿರಿನಾಥ್
ನಗರದಲ್ಲಿ ಎಲ್ಲಾ ಮಹಿಳೆಯರು ಹೆಚ್ಚು ಸಂಖ್ಯೆಯಲ್ಲಿ ಬಂದು ನಮ್ಮ ಸಂವಿಧಾನ ನೀಡಿರುವಂತಹ ಮತದಾನದ ಅಧಿಕಾರವನ್ನು ಚಲಾಯಿಸುವುದರ ಜೊತೆಗೆ ಎಲ್ಲರಲ್ಲೂ ಮತದಾನ ಮಾಡಲು ಪ್ರೇರೇಪಿಸೋಣ ಎಂದು ಅಪರ ಮುಖ್ಯ ಕಾರ್ಯದರ್ಶಿ ಶ್ರೀಮತಿ ಶಾಲಿನಿ ರಜನೀಶ್ ರವರು ತಿಳಿಸಿದರು.
 
ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಮತದಾನದ ಪ್ರಮಾಣ ಹೆಚ್ಚುವಂತೆ ಮಾಡುವ ಉದ್ದೇಶದಿಂದ ಮಹಿಳಾ ಮತದಾರರಲ್ಲಿ ಅರಿವು ಮೂಡಿಸಲು ಪುರಭವನ(ಟೌನ್‌ಹಾಲ್)ದಲ್ಲಿ ಹಮ್ಮಿಕೊಂಡಿದ್ದ ಪಿಂಕಥಾನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ನಗರದಲ್ಲಿ ಎಲ್ಲಾ ಮಹಿಳೆಯರು ಮತಗಟ್ಟೆಗಳಿಗೆ ಬಂದು ತಪ್ಪದೆ ಮತದಾನ ಮಾಡುವ ಸಲುವಾಗಿ ಪಿಂಕ್ ಬೂತ್ ಗಳ ವ್ಯವಸ್ಥೆ ಮಾಡಲಾಗಿದ್ದು, ಎಲ್ಲರೂ ತಪ್ಪದೆ ಮತ ಚಲಾಯಿಸಬೇಕು ಎಂದು ಹೇಳಿದರು. 
 
ಜಿಲ್ಲಾ ಚುನಾವಣಾಧಿಕಾರಿ ಮತ್ತು ಬಿಬಿಎಂಪಿ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಮಾತನಾಡಿ, ನಗರದಲ್ಲಿ ಈಗಾಗಲೇ ಎಲ್ಲರಿಗೂ ಮತದಾರರ ಗುರುತಿನ ಚೀಟಿ ವಿತರಣೆ ಮಾಡಿದ್ದು, ಅದರಲ್ಲಿ ಎಲ್ಲಾ ಮಾಹಿತಿಯೂ ಲಭ್ಯವಿರಲಿದೆ. ಇದರಿಂದ ಸುಲಭವಾಗಿ ಮತಗಟ್ಟೆಗೆ ತೆರಳಿ ಮತ ಚಲಾಯಿಸಬಹುದಾಗಿದ್ದು, ಎಲ್ಲರೂ ತಪ್ಪದೆ ಮತದಾನ ಮಾಡಲು ಕೋರಿದರು.
 
ಮತದಾನದ ದಿನ ವೇತನ ಸಹಿತ ರೆಜೆಯಿರಲಿದ್ದು, ಎಲ್ಲರೂ ತಪ್ಪದೆ ಮತದಾನ ಮಾಡಿ. ಮಹಿಳೆಯರಿಗಾಗಿ ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿಯೂ 5 ಪಿಂಕ್ ಬೂತ್ ಗಳ ವ್ಯವಸ್ಥೆ ಮಾಡಲಾಗಿದ್ದು, ಎಲ್ಲಾ ಪಿಂಕ್ ಬೂತ್ ಗಳಲ್ಲಿ ಮಹಿಳಾ ಅಧಿಕಾರಿ/ಸಿಬ್ಬಂದಿಗಳೇ ಕಾರ್ಯನಿರ್ವಹಿಸಲಿದ್ದಾರೆ. ಜೊತೆಗೆ ಪಿಂಕ್ ಬಣ್ಣದಲ್ಲಿ ವಿವಿಧ ಚಿತ್ರಗಳನ್ನು ರಚಿಸುವುದು, ಮತಚಾಲಯಿಸಲು ಬರುವವರಿಗೆ ಸ್ವಾಗತ ಕೋರುವುದು, ಸ್ವಾಗತ ಕಮಾನು, ಪಿಂಕ್ ಬಲೂನ್‌ಗಳ ಅಲಂಕಾರ ಸೇರಿದಂತೆ ಮಹಿಳೆಯರನ್ನು ಆಕರ್ಷಿಸಿಸುವ ರೀತಿ ಮತಗಟ್ಟೆಗಳನ್ನು ಸಿದ್ದಪಡಿಲಸಾಗುವುದು ಎಂದು ಹೇಳಿದರು.
 
ನಗರದಲ್ಲಿ ಪಿಂಕ್ ಮತಗಟ್ಟೆಗಳು ಮಾತ್ರವಲ್ಲದೆ ವಿವಿಧ ಥೀಮ್ ಬೇಸ್ಡ್ ಮತಗಟ್ಟೆಗಳನ್ನು ಮಾಡಲಾಗುತ್ತಿದ್ದು, ಅದರಂತೆ ಅಂಗವಿಕಲರ ಮತಗಟ್ಟೆ, ತೃತೀಯ ಲಿಂಗಿ ಮತಗಟ್ಟೆ, ತಂತ್ರಜ್ಞಾನ ಮತಗಟ್ಟೆ, ಪರಿಸರ(ಹಸಿರು ಬಣ್ಣದ) ಮತಗಟ್ಟೆ, ಸೈನಿಕ ಮತಗಟ್ಟೆ, ಕ್ರೀಡಾ ಮತಗಟ್ಟೆ, ಯುವ ಮತದಾರರ ಮತಗಟ್ಟೆ, ಸಂಸ್ಕೃತಿ ಮತಗಟ್ಟೆ, ಸೈನಿಕರ ವಿಶೇಷ ಮತಗಟ್ಟೆಗಳಿರಲಿವೆ ಎಂದರು.
 
ಮತದಾನದ ದಿನ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಂಬುಲೆನ್ಸ್ ಗಳ ವ್ಯವಸ್ಥೆ ಮಾಡಲಾಗುತ್ತಿದೆ. ಯಾವುದಾದರು ಮತಗಟ್ಟೆಗಳ ಬಳಿ ತುರ್ತು ಸಂಧರ್ಭ ಬಂದಲ್ಲಿ, ಆಂಬುಲೆನ್ಸ್ ಮೂಲಕ ವೈದ್ಯರ ಸೇವೆ ಒದಗಿಸಲಾಗುವುದು ಎಂದು ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಆನೆ ಬಲರಾಮ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ