Select Your Language

Notifications

webdunia
webdunia
webdunia
webdunia

ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಪ್ಲ್ಯಾನ್‌

ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಪ್ಲ್ಯಾನ್‌
bangalore , ಮಂಗಳವಾರ, 15 ನವೆಂಬರ್ 2022 (17:31 IST)
ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ವಿಚಾರಕ್ಕೆ ಸಂಬಂಧಪಟ್ಟಂತೆ, ನಾಗರಿಕರ ಒಕ್ಕೂಟದಿಂದ ಸರ್ಕಾರಕ್ಕೆ ನೀಡಿದ್ದ ಗಡುವು ಇಂದು ಅಂತ್ಯವಾಗಲಿದೆ. ಈವರೆಗೆ ಕಂದಾಯ ಇಲಾಖೆಯಿಂದ ಯಾವುದೇ ನಿರ್ಧಾರ ಪ್ರಕಟವಾಗಿಲ್ಲ. ಹೀಗಾಗಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆಗೆ ನಿರ್ಧಾರ ಮಾಡಲಾಗಿದೆ. ಗುರುವಾರ ಡಿಸಿ ಕಚೇರಿ, ಶನಿವಾರ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಚಾಮರಾಜಪೇಟೆ ನಾಗರಿಕರ ಒಕ್ಕೂಟ ತೀರ್ಮಾನ ಮಾಡಿದೆ. ಅನೇಕ ಕನ್ನಡಪರ ಹಾಗೂ ಹಿಂದೂಪರ ಸಂಘಟನೆಗಳು ಒಕ್ಕೂಟಕ್ಕೆ ಸಾಥ್ ನೀಡಿದ್ದಾರೆ. ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ತೆಗೆದುಕೊಂಡ ನಿರ್ಧಾರ ಇಲ್ಲಿ ಯಾಕೆ ಆಗ್ತಿಲ್ಲ ಅಂತ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ಮುಖಂಡನ ಬರ್ಬರ ಹತ್ಯೆ