Publish Date: Fri, 22 May 2026 (19:56 IST)
Updated Date: Fri, 22 May 2026 (20:00 IST)
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಹೊಸ ಲುಕ್ ನೀಡಲು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಹೇಳಿದರು.
ಈ ಸಂಬಂಧ ಮಾತನಾಡಿದ ಅವರು, ಕ್ರೀಡಾಂಗಣದಲ್ಲಿ ಮತ್ತಷ್ಟು ಹೈಟೆಕ್ ಯೋಜನೆ ರೂಪಿಸಿ, ಎಲ್ಇಡಿ ದೀಪಗಳನ್ನು ಅಳವಡಿಸುವುದಾಗಿ ಹೇಳಿದರು.
ಈಗಾಗಲೇ ಮೈಸೂರು ಹಾಗೂ ಹುಬ್ಬಳ್ಳಿ ಕ್ರೀಡಾಂಗಣಗಳಲ್ಲೂ ಎಲ್ಇಡಿ ವ್ಯವಸ್ಥೆ ಅಳವಡಿಸಲಾಗಿದೆ ಎಂದು ಹೇಳಿದರು.
ಪ್ರಸ್ತುತ ಕ್ರೀಡಾಂಗಣದಲ್ಲಿ 33 ಸಾವಿರ ಆಸನಗಳಿದ್ದರೂ, ಸುಮಾರು 26 ಸಾವಿರ ಪ್ರೇಕ್ಷಕರು ಮಾತ್ರ ಕುಳಿತುಕೊಳ್ಳಲು ಸಾಧ್ಯವಾಗುತ್ತಿದೆ. ಇದನ್ನು 55 ಸಾವಿರದಿಂದ 60 ಸಾವಿರ ಆಸನಗಳ ಸಾಮರ್ಥ್ಯಕ್ಕೆ ಹೆಚ್ಚಿಸಲು ಯೋಜನೆ ಸಿದ್ಧವಾಗುತ್ತಿದೆ ಎಂದು ಹೇಳಿದರು.
ಇನ್ನೂ ವಿಶ್ವದ ವಿವಿಧ ಭಾಗಗಳಿಂದ 28ಆರ್ಕಿಟೆಕ್ಚರ್ ಸಂಸ್ಥೆಗಳು ಮುಂದೆ ಬಂದಿದೆ. ಅತ್ಯುತ್ತಮ ಸಂಸ್ಥೆಗಳೊಂದಿಗೆ ಚರ್ಚೆ ನಡೆಯುತ್ತಿದೆ. ಶೀಘ್ರದಲ್ಲೇ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ವೆಂಕಟೇಶ್ ಪ್ರಸಾದ್ ಮಾಹಿತಿ ಹಂಚಿಕೊಂಡರು.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ