Webdunia - Bharat's app for daily news and videos

Install App

ಬ್ರೇಕ್ ಫಾಸ್ಟ್ ಮೀಟಿಂಗ್ ರಹಸ್ಯ ಕಾಪಾಡಲು ಸೂಪರ್ ಐಡಿಯಾ ಮಾಡಿದ ಸಿಎಂ ಸಿದ್ದರಾಮಯ್ಯ

Krishnaveni K
ಶನಿವಾರ, 29 ನವೆಂಬರ್ 2025 (09:48 IST)
ಬೆಂಗಳೂರು: ಹೈಕಮಾಂಡ್ ಅಣತಿ ಹಿನ್ನಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಡಿಕೆ ಶಿವಕುಮಾರ್ ಜೊತೆ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸುತ್ತಿದ್ದಾರೆ. ಆದರೆ ಈ ಮೀಟಿಂಗ್ ರಹಸ್ಯ ಕಾಪಾಡಲು ಸಿದ್ದು ಸೂಪರ್ ಐಡಿಯಾ ಮಾಡಿದ್ದಾರೆ.

ಇಂದು ಬೆಳಿಗ್ಗೆ 9.30 ಕ್ಕೆ ಬ್ರೇಕ್ ಫಾಸ್ಟ್ ಗೆ ಮನೆಗೆ ಬನ್ನಿ ಎಂದು ಸಿಎಂ ಸಿದ್ದರಾಮಯ್ಯ ನಿನ್ನೆಯೇ ಡಿಕೆ ಶಿವಕುಮಾರ್ ಗೆ ಆಹ್ವಾನವಿತ್ತಿದ್ದರು. ಹೈಕಮಾಂಡ್ ಸೂಚನೆ ನೀಡಿರುವ ಕಾರಣಕ್ಕೆ ಡಿಕೆ ಶಿವಕುಮಾರ್ ಕೂಡಾ ಇಂದು ಮೀಟಿಂಗ್ ಗೆ ಬರಲು ಒಪ್ಪಿಕೊಂಡಿದ್ದರು.

ಇದರ ಬಗ್ಗೆ ಸ್ವತಃ ಸಿಎಂ ಮಾಧ್ಯಮಗಳ ಮುಂದೆ ಮಾಹಿತಿ ನೀಡಿದ್ದರು. ಸಹಜವಾಗಿಯೇ ಬ್ರೇಕ್ ಫಾಸ್ಟ್ ಮೀಟಿಂಗ್ ಬಗ್ಗೆ ಮಾಧ್ಯಮಗಳು, ಸಾರ್ವಜನಿಕರು ಕುತೂಹಲದಿಂದ ನೋಡುತ್ತಿದ್ದಾರೆ. ಆದರೆ ಇಲ್ಲಿ ನಡೆಯುವ ಮಾತುಕತೆ ವಿವರ ಲೀಕ್ ಆಗದಂತೆ ನೋಡಿಕೊಳ್ಳುವುದು ಮುಖ್ಯವಾಗಿತ್ತು.

ಈ ಕಾರಣಕ್ಕೆ ಇಂದು ಸಿಎಂ ಅಧಿಕೃತ ನಿವಾಸದಲ್ಲಿ ತೀರಾ ಅಗತ್ಯವಿರುವ ಸಿಬ್ಬಂದಿಗಳನ್ನು ಮಾತ್ರ ಬರಲು ಹೇಳಲಾಗಿದೆ. ಉಳಿದ ಸಿಬ್ಬಂದಿಗಳಿಗೆ ಕರ್ತವ್ಯಕ್ಕೆ ಹಾಜರಾಗದೇ ಇರಲು ಸೂಚಿಸಲಾಗಿದೆ. ಹೀಗಾಗಿ ಇಂದು ಕಾವೇರಿ ನಿವಾಸದಲ್ಲಿ ಬೆರಳಣಿಕೆಯ ಸಿಬ್ಬಂದಿ ಮಾತ್ರ ಇದ್ದಾರೆ. ಸಿಬ್ಬಂದಿಗಳಿಂದಲೇ ವಿಷಯ ಲೀಕ್ ಆದರೆ ಎಂಬ ಭಯಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣ ಭೈರೇಗೌಡ ಬಳಿಕ ಭೈರತಿ ಸುರೇಶ್ ಸರದಿ: ದಿಡೀರ್ ಬಿಎಂಟಿಸಿ ಬಸ್ ಸ್ಟ್ಯಾಂಡ್ ನಲ್ಲಿ ಸಚಿವರು ಪ್ರತ್ಯಕ್ಷ Video

ಸಾರ್ವಜನಿಕರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ನೀಡಲು ಸರ್ಕಾರದಿಂದ ಪ್ರಜಾಸೇವಾ ಅಭಿಯಾನ: ಕಾರ್ಯನಿರ್ವಹಣೆ ಹೇಗೆ ಗಮನಿಸಿ

H-1B ಕಟ್ಟುಪಾಡು: ಭಾರತೀಯ ಐಟಿ ಮಂದಿಗೆ ಸವಾಲೋ, ಗ್ಲೋಬಲ್ ಆಫರ್ ಪಡೆಯುವ ಬಂಗಾರದ ಅವಕಾಶವೋ

ಉತ್ತರ ಪ್ರದೇಶದಲ್ಲಿ ಖಾಸಗಿ ಬಸ್ ಏರಿದ ಯುವತಿಗೆ ಇದೆಂಥಾ ಶಾಕ್: ಬಸ್ ನಲ್ಲೇ ನಡೆಯಿತು ರೇಪ್ Video

ಸಚಿವರೆಂದರೆ ಹೀಗಿರಬೇಕು…ಬೆಳ್ಳಂ ಬೆಳಿಗ್ಗೆ ಕಸದ ಗಾಡಿ ಪಕ್ಕ ಕೃಷ್ಣ ಭೈರೇಗೌಡ ನೋಡಿ ಜನರಿಗೆ ಶಾಕ್: Video

ಮುಂದಿನ ಸುದ್ದಿ
Show comments