Select Your Language

Notifications

webdunia
webdunia
webdunia
webdunia

ಲೋಕಸಭಾ ಚುನಾವಣೆ ಸಿದ್ದತೆಗೆ ಯೋಜನಾ ಸಭೆ

election

geetha

bangalore , ಸೋಮವಾರ, 8 ಜನವರಿ 2024 (15:41 IST)
ಬೆಂಗಳೂರು : ಲೋಕಸಭಾ ಚುನಾವಣೆಗೆ  ರಣತಂತ್ರ ರೂಪಿಸುವ ಸಲುವಾಗಿ ಬಿಜೆಪಿ ನಾಯಕರು ಸೋಮವಾರ ಯೋಜನಾ ಸಭೆ  ಆಯೋಜಿಸಿದ್ದಾರೆ. ಬೆಂಗಳೂರಿನ ಹೊರವಲಯದಲ್ಲಿರುವ ಯಲಹಂಕ -ದೊಡ್ಡಬಳ್ಳಾಪುರ ರಸ್ತೆಯ ಖಾಸಗಿ ಹೋಟೆಲ್‌ ಒಂದರಲ್ಲಿ ಯೋಜನಾ ಸಭೆಯನ್ನು ಆಯೋಜಿಸಲಾಗಿದ್ದು, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌  ಸಭೆಯ ನೇತೃತ್ವ ವಹಿಸಿದ್ದಾರೆ. ಜೆಡಿಎಸ್‌ ಜೊತೆಗಿನ ಮೈತ್ರಿ, ಟಿಕೆಟ್‌ ಹಂಚಿಕೆ, ಅಭ್ಯರ್ಥಿಗಳ ಆಯ್ಕೆ ಸೇರಿದಂತೆ ಹಲವು ಮುಖ್ಯ ವಿಚಾರಗಳ ಬಗ್ಗೆ ಬಿಜೆಪಿ ನಾಯಕರು ಇಂದು ಚರ್ಚೆ ನಡೆಸಲಿದ್ದಾರೆ. 
 
ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಡಿ.ವಿ. ಸದಾನಂದಗೌಡ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ್ ಪೂಜಾರಿ ಸೇರಿದಂತೆ ಪಕ್ಷದ ಪ್ರಮುಖರು ಸಭೆಯಲ್ಲಿ ಭಾಗವಹಿಸಿದ್ದಾರೆ.
 

Share this Story:

Follow Webdunia kannada

ಮುಂದಿನ ಸುದ್ದಿ

ಹನುಮಾನ್‌ ಆದಾಯದಲ್ಲಿ ರಾಮನಿಗೂ ಪಾಲು