ಗಣೇಶ ಹಬ್ಬಕ್ಕೆ ಊರಿಗೆ ಹೋಗಲು ಪ್ಲ್ಯಾನ್ ಮಾಡಿದ್ದೀರಾ, ನಿಮಗೆ ಕಾದಿದೆ ಶಾಕ್

Krishnaveni K
ಸೋಮವಾರ, 2 ಸೆಪ್ಟಂಬರ್ 2024 (11:17 IST)
ಬೆಂಗಳೂರು: ಈ ವಾರಂತ್ಯಕ್ಕೆ ಗಣೇಶ ಹಬ್ಬಕ್ಕೆ ಎರಡು ದಿನ ರಜೆ ಇದೆ, ಊರಿನಲ್ಲಿ ಹಬ್ಬ ಆಚರಿಸೋಣ ಎಂದು ಬೆಂಗಳೂರಿಗರು ಅಂದುಕೊಂಡಿದ್ದರೆ ಅವರಿಗೆ ಶಾಕ್ ಕಾದಿದೆ.

ವಾರಂತ್ಯದಲ್ಲಿ ಸುದೀರ್ಘ ರಜೆಯಿದ್ದರೆ ಕೆಎಸ್ ಆರ್ ಟಿಸಿ, ಖಾಸಗಿ ಬಸ್ ಗಳಿಗೆ ಬೇಡಿಕೆ ಹೆಚ್ಚುತ್ತದೆ. ಇದೀಗ ಅದೇ ಪರಿಸ್ಥಿತಿಯಾಗಿದೆ. ಚೌತಿ ಹಬ್ಬಕ್ಕೆ ಊರಿಗೆ ಹೋಗಲು ಸಾಕಷ್ಟು ಜನ ತುದಿಗಾಲಲ್ಲಿ ನಿಂತಿದ್ದರು. ಆದರೆ ಊರಿಗೆ ಹೋಗಲು ತಯಾರಾಗಿರುವವರಿಗೆ ಬಸ್ ಟಿಕೆಟ್ ದರ ಶಾಕ್ ನೀಡಿದೆ.

ಈಗಾಗಲೇ ಕೆಎಸ್ ಆರ್ ಟಿಸಿ ಬಸ್ ಗಳಲ್ಲಿ ಬಹುತೇಕ ಟಿಕೆಟ್ ಗಳು ಸೋಲ್ಡ್ ಔಟ್ ಆಗಿದೆ. ವಿಶೇಷ ಬಸ್ ಹಾಕಿದ್ದರೂ ಅದೂ ಬಿಸಿ ದೋಸೆಯಂತೆ ಖಾಲಿಯಾಗುತ್ತಿದೆ. ಹೀಗಾಗಿ ಖಾಸಗಿ ಬಸ್ ನತ್ತ ಜನ ಮುಖ ಮಾಡಿದ್ದಾರೆ. ಆದರೆ ಖಾಸಗಿ ಬಸ್ ನ ದರ ಸಾಮಾನ್ಯವಾಗಿ ಇರುವುದಕ್ಕಿಂತ ದುಪ್ಪಟ್ಟಾಗಿದೆ.

ಬೆಂಗಳೂರಿನಿಂದ ಮಂಗಳೂರು, ವಿಜಯಪುರಕ್ಕೆ 700 ರೂ. ಬಸ್ ಟಿಕೆಟ್ ದರವಿದ್ದರೆ ಈಗ 1400-1500 ರೂ.ವರೆಗೆ ತಲುಪಿದೆ. ಹುಬ್ಬಳ್ಳಿ ಕಡೆಗೆ 900 ರೂ.ಗಳಿದ್ದಟಿಕೆಟ್ ದರ 1300 ರೂ. ದಾಟಿದೆ. ಕೆಎಸ್ ಆರ್ ಟಿಸಿ ಕೂಡಾ ಸಾಮಾನ್ಯ ದಿನಗಳಿಗಿಂತ ಹೆಚ್ಚು ದರ ವಸೂಲಿ ಮಾಡುತ್ತಿವೆ. ಆದರೆ ಖಾಸಗಿ ಬಸ್ ಗಳಷ್ಟು ದುಬಾರಿಯಲ್ಲ ಎನ್ನಬಹುದು. ಆದರೂ ಗಣೇಶ ಹಬ್ಬಕ್ಕೆ ಊರಿಗೆ ಹೋಗುವವರಿಗೆ ಟಿಕೆಟ್ ದರ ನೋಡಿಯೇ ಹಿಂಜರಿಯುವಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ಮುಂದಿನ ಸುದ್ದಿ
Show comments