Webdunia - Bharat's app for daily news and videos

Install App

ನಗರದ ಮಾರ್ಕೆಟ್ ನಲ್ಲಿ ಪ್ಲಾಸ್ಟಿಕ್ ಬೀಳ್ತಿಲ್ಲ ಬ್ರೇಕ್

Webdunia
ಬುಧವಾರ, 27 ಜುಲೈ 2022 (19:15 IST)
ಪ್ಲಾಸ್ಟಿಕ್ ಬಳಸದಂತೆ ಸರ್ಕಾರದ ಆದೇಶವಿದ್ರು ಅದನ್ನೇಲ್ಲ ಧಿಕಾರಿಸಿ ನಗರದಲ್ಲಿ ಪ್ಲಾಸ್ಟಿಕ್ ಉಪಯೋಗಿಸಲಾಗ್ತಿದೆ. ಸಣ್ಣಪುಟ್ಟ ಅಂಗಳಿಗಳಿಂದ ದೊಡ್ಡ ಅಂಗಡಿಗಳವರೆಗೂ ಪ್ಲಾಸ್ಟಿಕ್ ಯಥೇಚ್ಛವಾಗಿ ಬಳಸಲಾಗ್ತಿದೆ. ಇನ್ನು ಸರ್ಕಾರದ ಆದೇಶಕ್ಕೆ ಕವಡೆ ಕಾಸಿನ ಕಿಮ್ಮತ್ತಿಲ್ಲದಂತಾಗಿದೆ.ಸಣ್ಣಪುಟ್ಟ ಅಂಗಡಿಗಳು ಸೇರಿದಂತೆ ಬೇಕರಿ , ದಿನಸಿ ಅಂಗಡಿ ಎಲ್ಲ ಕಡೆಯೂ ಪ್ಲಾಸ್ಟಿಕ್ ಕವರ್ ಗಳು ರಾರಾಜಿಸುತ್ತಿದೆ. ಕೆಲವೊಂದು ಭಾಗಗಳಲ್ಲಿ ಸ್ವತಃ ಮಾರ್ಷಲ್ ಗಳು ಫೀಲ್ಡ್ ಗಿಳಿದು ಪರಿಶೀಲನೆ ಮಾಡಿದಾಗ ಪ್ಲಾಸ್ಟಿಕ್ ಯಥೇಚ್ಛವಾಗಿ ಸಿಕ್ಕಿದೆ. ಅದ‌ನ್ನ ವಶಪಡಿಸಿಕೊಂಡು ದಂಡ ಹಾಕಲು ಮುಂದಾಗಿದ್ದಾರೆ. ಅಷ್ಟೇ ಕೆಲವೊಂದು  ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಕವರ್ ನಲ್ಲಿ ಪರ್ಸಲ್ ಮಾಡಿಕೊಡ್ತಾರೆ.
 
ಇನ್ನು ಅಂಗಡಿಗಳಲ್ಲಿ ಮಾರಾಟಗಾರರನ್ನ ಯಾಕೆ ಪ್ಲಾಸ್ಟಿಕ್ ನಿಷೇಧವಿದ್ರು ಉಪಯೋಗಿಸ್ತೀರಾ ಅಂತಾ ಕೇಳಿದ್ರೆ ಜನರಿಗೆ ಯಾವುದರಲ್ಲಿ ಹಾಕಿ ಕೊಡೋಣ್ಣ ಅಂತಾರೆ. ಇನ್ನು ಪ್ಲಾಸ್ಟಿಕ್ ಕವರ್ ಬದಲಿಗೆ ಬಟ್ಟೆ ಬ್ಯಾಗ್ ಗಳಲ್ಲಿ ಕೆಲವೊಂದು ಪದಾರ್ಥಗಳನ್ನ ಹಾಕಿಕೊಡ್ತಾರೆ.ಆದ್ರೆ ಪ್ಲಾಸ್ಟಿಕ್ ಗಿಂತ ಬಟ್ಟೆ ಕವರ್ ಬೆಲೆ ಜಾಸ್ತಿ.ಹೀಗಾಗಿ ಜನರು ತೆಗೆದುಕೊಳ್ಳಲು ಹಿಂದೆ- ಮುಂದೆ ನೋಡ್ತಾರೆ.ಇನ್ನು 10 ಕೆಜಿ ಮೇಲ್ಪಟ್ಟ ಐಟಂ ತಗೊಂಡ್ರೆ ಪ್ಲಾಸ್ಟಿಕ್ ಕವರ್ ಕೊಡಲೇಬೇಕು .ಇಲ್ಲವಾದರೆ ಜನರು ಗಲಾಟೆ ಮಾಡ್ತಾರೆ ಅಂತಾ ಅಂಗಡಿಯವರು ಪ್ರತಿಕ್ರಿಯಿಸುತ್ತಾರೆ. ಪ್ಲಾಸ್ಟಿಕ್ ನಿಷೇಧವಿದ್ರು ಅಂಗಡಿ- ಮುಂಗಟ್ಟುಗಳಲ್ಲಿ ರಾಜರೋಷವಾಗಿ ಪ್ಲಾಸ್ಟಿಕ್ ಉಪಯೋಗಿಸ್ತಿದ್ದಾರೆ. ಹೀಗಾದ್ರೆ ಪರಿಸರಕ್ಕೆ ಇನ್ನಷ್ಟು ಹಾನಿಯಾಗುತ್ತೆ. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿಗೆ ಕ್ಯಾರೇ ಎನ್ನದ ಸಿದ್ದು, ಭುಗಿಲೆದ್ದ ಕಾಂಗ್ರೆಸ್ ಅಂತಃಕಲಹ, ಸೆಪ್ಟೆಂಬರ್‌ನಲ್ಲಿ ಮುಹೂರ್ತ ಫಿಕ್ಸ್: ಬಿಜೆಪಿ

ರಾಜ್ಯದ ಸಣ್ಣ ವ್ಯಾಪಾರಸ್ಥರ ಹಿತರಕ್ಷಣೆಗೆ ಬಿಜೆಪಿ ಸಹಾಯವಾಣಿ - ಛಲವಾದಿ ನಾರಾಯಣಸ್ವಾಮಿ

ಡಿಕೆಶಿ ಕುರ್ಚಿ ಕಸಿದುಕೊಳ್ಳುವ ದುಸ್ಸಾಹಸಕ್ಕೆ ಕೈಹಾಕಿದರೆ ಮನೆಯಲ್ಲಿ ಕೂರಿಸುವ ಎಚ್ಚರಿಕೆ ಕೊಟ್ರಾ ಸಿದ್ದರಾಮಯ್ಯ: ಆರ್ ಅಶೋಕ್‌

ಆರ್‌ಸಿಬಿ ಕಾಲ್ತುಳಿತ ಪ್ರಕರಣ, ಅಮಾಯಕರ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲಲ್ಲ: ಆರ್‌ ಅಶೋಕ್‌

ತುರ್ತು ನಿರ್ವಹಣಾ ಕಾಮಗಾರಿ: ಬೆಂಗಳೂರಿನ ಈ ಭಾಗದಲ್ಲಿ ಜು.21, 22ರಂದು ವಿದ್ಯುತ್ ವ್ಯತ್ಯಯ

ಮುಂದಿನ ಸುದ್ದಿ
Show comments