Webdunia - Bharat's app for daily news and videos

Install App

ಕೈ ಮುಗಿತೀನಿ ಕಾವೇರಿ ಬಗ್ಗೆ ಏನು ಕೇಳಬೇಡಿ: ಆರ್.ವಿ.ದೇಶಪಾಂಡೆ

Webdunia
ಶುಕ್ರವಾರ, 16 ಸೆಪ್ಟಂಬರ್ 2016 (17:35 IST)
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಕೈ ಮುಗಿತೀನಿ ಕಾವೇರಿ ಬಗ್ಗೆ ಏನು ಕೇಳಬೇಡಿ ಎಂದು ಸಚಿವ ಆರ್.ವಿ.ದೇಶಪಾಂಡೆ ಪ್ರತಿಕ್ರಿಯೆ ನೀಡಿದ್ದಾರೆ.
 
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನದಿ ನೀರು ಹಂಚಿಕೆ ವಿವಾದ ನೂರು ವರ್ಷಗಳಷ್ಟು ಹಳೆಯದಾಗಿದ್ದು, ವಿವಾದದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಧ್ಯಸ್ಥಿಕೆ ವಹಿಸಿ ಉಭಯ ರಾಜ್ಯಗಳ ನಡುವಿನ ಜಲ ವಿವಾದವನ್ನು ಇತ್ಯರ್ಥಗೊಳಿಸಲಿ ಎಂದು ಆಗ್ರಹಿಸಿದರು.
 
ಕಾವೇರಿ ವಿವಾದದಲ್ಲಿ ಕಾನೂನು ಹೋರಾಟ ನಡೆಸುವಲ್ಲಿ ರಾಜ್ಯ ಸರಕಾರ ವಿಫಲವಾಗಿಲ್ಲ. ರಾಜ್ಯ ಸರಕಾರ ತಮಿಳುನಾಡಿಗೆ ನೀರು ಹರಿದುಬಿಡುವುದನ್ನು ತಡೆಯಲು ಅಗತ್ಯವಾದ ಕ್ರಮಗಳನ್ನು ಕೈಗೊಂಡಿದೆ ಎಂದು ಸ್ಪಷ್ಟಪಡಿಸಿದರು. 
 
ಮುಖ್ಯಮಂತ್ರಿ ಸಿದ್ದರಾಮಯ್ಯ, ಜಲಸಂಪನ್ಮೂಲ ಖಾತೆ ಸಚಿವ ಎಂ.ಬಿ.ಪಾಟೀಲ್, ಸುಪ್ರೀಂಕೋರ್ಟ್‌ನಲ್ಲಿ ಕರ್ನಾಟಕ ಪರ ವಕೀಲರಾದ ಫಾಲಿ ನಾರಿಮನ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದು, ಕಾವೇರಿ ಜಲಾಶಯಗಳ ಬಗ್ಗೆ ವಾಸ್ತವ ಮಾಹಿತಿಯ ದಾಖಲೆಗಳನ್ನು ನೀಡಿದ್ದಾರೆ. ಮುಂಬರುವ ಅಕ್ಟೋಬರ್ 18 ರಂದು ಸುಪ್ರೀಂಕೋರ್ಟ್‌ನಲ್ಲಿ ನಡೆಯಲಿರುವ ವಿಚಾರಣೆ ಸಂದರ್ಭದಲ್ಲಿ ತೀರ್ಪು ಕರ್ನಾಟಕದ ಪರವಾಗಿ ಬರುವ ವಿಶ್ವಾಸವಿದೆ ಎಂದು ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಖಾಸಗಿ ಆಸ್ಪತ್ರೆಗೆ ಸಿದ್ದರಾಮಯ್ಯ ದೌಡು: ಸರ್ಕಾರೀ ಆಸ್ಪತ್ರೆ ಯಾಕೆ ಹೋಗಲ್ಲ ಎಂದ ಜನ

ರೈಲ್ವೆ ನಿಲ್ದಾಣದಲ್ಲೇ ಮಹಿಳೆಗೆ ಹೆರಿಗೆ ನೋವು: ಬ್ರಿಡ್ಜ್ ಮೇಲೆಯೇ ಹೆರಿಗೆ ಮಾಡಿಸಿದ್ದ ಸೇನಾ ವೈದ್ಯನಿಗೆ ಭಾರೀ ಮೆಚ್ಚುಗೆ

ಪ್ರವಾಹ ಪರಿಹಾರಕ್ಕೆ ನನ್ನ ಬಳಿ ದುಡ್ಡಿಲ್ಲ: ಸಂಸದೆ ಕಂಗನಾ ರನೌತ್‌ ಹೇಳಿಕೆಗೆ ಕಾಂಗ್ರೆಸ್‌ ಭಾರೀ ಟೀಕೆ

ಕೋವಿಡ್ ದೃಢಪಟ್ಟವರಲ್ಲೇ ಹೆಚ್ಚು ಹೃದಯಾಘಾತ: ಕೋವಿಡ್ ಲಸಿಕೆ ಬಗ್ಗೆ ದಿನೇಶ್ ಗುಂಡೂರಾವ್‌ ಸ್ಫೋಟಕ ಮಾಹಿತಿ

ಯಾದಗಿರಿ: ಕಲುಷಿತ ನೀರು ಸೇವನೆ, ಮೂವರು ಸಾವು, ಹಲವರು ಅಸ್ವಸ್ಥ

ಮುಂದಿನ ಸುದ್ದಿ
Show comments