Webdunia - Bharat's app for daily news and videos

Install App

ಜನಾರ್ದನ ರೆಡ್ಡಿ, ರಾಮುಲು ವಿರುದ್ಧ ಸಿಎಂ, ಪಿಎಂ ಕ್ರಮಕೈಗೊಳ್ಳಲಿ: ಹೀರೆಮಠ್

Webdunia
ಶುಕ್ರವಾರ, 16 ಡಿಸೆಂಬರ್ 2016 (18:48 IST)
ಬ್ಲ್ಯಾಕ್ ಮನಿಯನ್ನು ವೈಟ್ ಮಾಡಿರುವ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮತ್ತು ಸಂಸದ ಶ್ರೀರಾಮುಲು ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪ್ರಧಾನಿ ನರೇಂದ್ರ ಮೋದಿ ಕಠಿಣ ಕ್ರಮಕ್ಕೆ ಮುಂದಾಗಬೇಕು ಎಂದು ಸಮಾಜ ಪರಿವರ್ತನ ಸಮುದಾಯದ ಮುಖ್ಯಸ್ಥ ಎಸ್.ಆರ್.ಹೀರೆಮಠ್ ಒತ್ತಾಯಿಸಿದ್ದಾರೆ.
 
ಧಾರವಾಡದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಪ್ಪು ಹಣ ತಡೆಗಟ್ಟುವ ಉದ್ದೇಶದಿಂದ ದೇಶಾದ್ಯಂತ ಏಕಾಏಕಿ 500, 1000 ಮುಖಬೆಲೆಯ ನೋಟ್ ಬ್ಯಾನ್ ಮಾಡಿದ ನಂತರ 125 ಕೋಟಿ ಬ್ಲ್ಯಾಕ್ ಮನಿ ಖರ್ಚು ಮಾಡಿ ಮಾಜಿ ಸಚಿವ ಜನಾರ್ಧನ ರೆಡ್ಡಿ ತಮ್ಮ ಪುತ್ರಿಯ ಅದ್ಧೂರಿ ವಿವಾಹ ಮಾಡಿದ್ದಾರೆ. ಇತ್ತ ಸಂಸದ ಶ್ರೀರಾಮುಲು 100 ಕೋಟಿ ರೂಪಾಯಿ ವೆಚ್ಚದಲ್ಲಿ ಮನೆ ಕಟ್ಟಿದ್ದಾರೆ. ಜನಸಾಮಾನ್ಯರು ದಿನಕ್ಕೆ 2 ಸಾವಿರ ರೂಪಾಯಿ ಪಡೆಯಲು ಪರದಾಡುತ್ತಿದ್ದಾರೆ. ಆದರೆ, ಇಂತವರು ಬ್ಲ್ಯಾಕ್ ಮನಿಯನ್ನು ವೈಟ್ ಮಾಡುವ ದಂಧೆಯಲ್ಲಿ ತೊಡಗಿ ದೇಶದಲ್ಲಿ ಆರ್ಥಿಕ ಅಪರಾಧಗಳನ್ನು ಎಸಗಿದ್ದಾರೆ ಎಂದು ಕಿಡಿ ಕಾರಿದರು. 
 
ಸಿಬಿಐ ಹಾಗೂ ಸಿಐಡಿ ಅಧಿಕಾರಿಗಳು ಜಂಟಿಯಾಗಿ ಇವರ ಮನೆಗಳ ಮೇಲೆ ದಾಳಿ ನಡೆಸಬೇಕು. ಶ್ರೀರಾಮಲು ತಮ್ಮ ಪಕ್ಷದ ಸಂಸದ ಎಂದು ಪ್ರಧಾನಿ ಮೋದಿ ಅವರು ಸುಮ್ಮನೆ ಇರಬಾರದು. ಈ ಇಬ್ಬರ ಕುರಿತು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರುವೆ ಎಂದು ಸಮಾಜ ಪರಿವರ್ತನ ಸಮುದಾಯದ ಮುಖ್ಯಸ್ಥ ಎಸ್.ಆರ್.ಹೀರೆಮಠ್ ಹೇಳಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pehalgam terror attack: ಇಸ್ರೇಲ್ ಬಳಿಕ ಭಾರತಕ್ಕೆ ಬಂದಿಳಿದ ಅಮೆರಿಕಾದ ಯುದ್ಧ ವಿಮಾನ: ಏನಿದರ ಹಿಂದಿನ ಲೆಕ್ಕಾಚಾರ

Mangaluru: ಪಹಲ್ಗಾಮ್ ಉಗ್ರರ ದಾಳಿಯನ್ನು ಸಮರ್ಥಿಸಿ ಫೇಸ್ ಬುಕ್ ನಲ್ಲಿ ಪೋಸ್ಟ್

Gold Price today: ಚಿನ್ನದ ದರ ಇಂದು ಮತ್ತೆ ಏರಿಕೆ, ಎಷ್ಟಾಗಿದೆ ನೋಡಿ

Pehalgam: ಪಹಲ್ಗಾಮ್ ನಲ್ಲಿ ರಕ್ತಪಾತ ಮಾಡಿದ ಉಗ್ರರು ಈಗ ಎಲ್ಲಿದ್ದಾರೆ ಎಂಬುದು ಪತ್ತೆ

Viral Video: ಈ ಮಕ್ಕಳಿಗೆ ಯೋಧರ ಮೇಲೆ ಅದೆಂಥಾ ಗೌರವ ನೀವೇ ವಿಡಿಯೋ ನೋಡಿ

ಮುಂದಿನ ಸುದ್ದಿ
Show comments